ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಟ್ರಾಕ್ಟರ್ ಪಲ್ಟಿಯಾದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮತ್ತೋರ್ವ ಕಾರ್ಮಿಕ ಗಂಭೀರ ಗಾಯಗೊಂಡಿದ್ದಾರೆ. ಜಾರ್ಖಂಡ್ ಮೂಲದ ಕಾರ್ಮಿಕ ದಿಬೋ ಶಂಕರ್ ನಾಯರ್ (22ವರ್ಷ) ಮೃತ ದುರ್ದೈವಿ.
ಚಾರ್ಮಾಡಿ ಘಾಟ್ನಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರಾಕ್ಟರ್ ಗೆ ಅಳವಡಿಸಿದ್ದ ಟ್ಯಾಂಕರ್ನಲ್ಲ್ಲಿ ನೀರು ತುಂಬಿಸಿಕೊಂಡು ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿದೆ. ಟ್ರಾಕ್ಟರ್ನಲ್ಲಿ ಕುಳಿತ್ತಿದ್ದ ಶಂಕರ್ ನಾಯರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಕಾರ್ಮಿಕ ಗಂಭೀರ ಗಾಯಗೊಂಡಿದ್ದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.