ಕಳಸ ತಾಲ್ಲೂಕಿನ ಸಂಸೆ ಗ್ರಾಮದ ಶುಂಠಿಕುಂಬ್ರಿ ಎಂಬಲ್ಲಿ ಬೃಹತ್ ಗಾತ್ರದ ಹೆಬ್ಬಾವನ್ನು ಹಿಡಿದು ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡಲಾಗಿದೆ.
ಸುಮಾರು 15ದಿನಗಳಿಂದ ಶುಂಠಿಕುಂಬ್ರಿಯಲ್ಲಿ ಈ ಹೆಬ್ಬಾವು ಬೀಡುಬಿಟ್ಟು ಜನರಲ್ಲಿ ಆತಂಕ ಮೂಡಿಸಿತ್ತು. ಗ್ರಾಮಸ್ಥರು ಅರಣ್ಯ ಇಲಾಖೆ ಗಮನಕ್ಕೆ ತಂದರೂ ಯಾವುದೇ ಸ್ಪಂದನೆ ಸಿಕ್ಕಿರಲಿಲ್ಲ. ಇದರಿಂದ ನೊಂದ ಗ್ರಾಮಸ್ಥರು ಧರ್ಮಸ್ಥಳ ಶೌರ್ಯವಿಪತ್ತು ತಂಡದ ಗಮನಕ್ಕೆ ತಂದರು.
ಇದಕ್ಕೆ ಸ್ಪಂದಿಸಿದ ಸ್ಪಂದಿಸಿದ ಶೌರ್ಯ ತಂಡದ ಸುಧಾಕರ್, ಗ್ರಾಮದ ಯುವಕರಾದ ರವೀಶ್, ಸಚಿನ್ ಅರಣ್ಯ ಇಲಾಖೆಯ ಗಮನಕ್ಕೆ ತಂದು ಹೆಬ್ಬಾವನ್ನು ಹಿಡಿದು ಅರಣ್ಯ ಇಲಾಖೆಯ ಮಂಜುನಾಥ್ ನಾಯಕ್ ಸಹಾಯದಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನಕ್ಕೆ ಬಿಟ್ಟಿದ್ದಾರೆ.