ಸೇತುವೆಯಿಂದ ಬಿದ್ದು ವ್ಯಕ್ತಿ ಮೃತಪಟ್ಟಿರುವ ಘಟನೆ ಆಲ್ದೂರು ಪೊಲೀಸ್ ಠಾಣೆ ವ್ಯಾಪ್ತಿಯ ಸಾರಗೋಡು ಬಾಸ್ತಿ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕಳಸ ತಾಲ್ಲೂಕಿನ ಹಿರೇಬೈಲ್ ಯಳಂದೂರು ಗ್ರಾಮದ ಹರಿಶ್ಚಂದ್ರ ಎಂದು ಗುರುತಿಸಲಾಗಿದೆ.
ಬಾಸ್ತಿ ಸಮೀಪ ಸೇತುವೆಯಿಂದ ಹೊಳೆಗೆ ಬಿದ್ದಿದ್ದು, ತಲೆಗೆ ಪೆಟ್ಟು ತಗುಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ದಾರಿಯಲ್ಲಿ ಹೋಗುವವರು ಮೃತ ಶರೀರವನ್ನು ನೋಡಿ ಮಾಹಿತಿ ನೀಡಿದ್ದಾರೆ. ಹರಿಶ್ಚಂದ್ರ ಕೆಲಸ ಹುಡಕಿಕೊಂಡು ಸಾರಗೋಡು ಗ್ರಾಮಕ್ಕೆ ಆಗಮಿಸಿದ್ದರು ಎನ್ನಲಾಗಿದೆ.
ಸೇತುವೆಯಿಂದ ಆಕಸ್ಮಿಕವಾಗಿ ಬಿದ್ದಿದ್ದಾರೋ ಅಥವಾ ಆತ್ಮಹತ್ಯೆಯೋ ಎಂದು ತಿಳಿದುಬಂದಿಲ್ಲ.
ಹರಿಶ್ಚಂದ್ರ ತಾಯಿ ಮತ್ತು ತಂಗಿ ಮಂಗಳೂರಿನಲ್ಲಿ ವಾಸವಾಗಿದ್ದಾರೆ ಎಂದು ತಿಳಿದುಬಂದಿದೆ. ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವರದಿ : ತಳವಾರ ಪ್ರಸನ್ನ