ಚಿಕ್ಕಮಗಳೂರು ಜಿಲ್ಲಾ ಉತ್ಸವದ ಪ್ರಯುಕ್ತ ರಾಜ್ಯಮಟ್ಟದ ಮತ್ತು ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯನ್ನು ಜನವರಿ 14 ಶನಿವಾರ ಆಯೋಜಿಸಲಾಗಿದೆ.
ಚಿಕ್ಕಮಗಳೂರು ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ.
ಪಂದ್ಯಾವಳಿಯಲ್ಲಿ ರಾಜ್ಯಮಟ್ಟದ ಮುಕ್ತ ವಿಭಾಗ, ಅಂಡರ್ 10, ಅಂಡರ್ 12, ಅಂಡರ್ 14 ವಿಭಾಗದಲ್ಲಿ ಬಾಲಕರು ಮತ್ತು ಬಾಲಕಿಯರಿಗೆ ಪ್ರತ್ಯೇಕ ಸ್ಪರ್ಧೆ ಇರಲಿದೆ.
ಅದೇ ರೀತಿ ಚಿಕ್ಕಮಗಳೂರು ಜಿಲ್ಲಾ ವಿಭಾಗ ಮಟ್ಟದಲ್ಲಿಯೂ ಆಟಗಾರರಿಗೆ ಪ್ರತ್ಯೇಕ ಬಹುಮಾನಗಳಿವೆ. ನಗದು ಬಹುಮಾನ ಮತ್ತು ಎಲ್ಲಾ ವಿಭಾಗಗಳಲ್ಲಿ ಆಕರ್ಷಕ ಟ್ರೋಪಿಗಳನ್ನು ನೀಡಲಾಗುತ್ತದೆ.
ಆಟಗಾರರಿಗೆ ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ. ಮಧ್ಯಾಹ್ನದ ಊಟದ ವ್ಯವಸ್ಥೆ ಇರುತ್ತದೆ.
ಹೆಚ್ಚಿನ ಮಾಹಿತಿಗೆ ಚಿಕ್ಕಮಗಳೂರು ಜಿಲ್ಲಾ ಚೆಸ್ ಅಸೋಸಿಯೇಷನ್ ಪದಾಧಿಕಾರಿಗಳನ್ನು ಸಂಪರ್ಕಿಸಬಹುದು
ನಯನ ತಳವಾರ : 9449665453, ಸುಧೀರ್ ಕಡಿದಾಳು : 7795671234, ಗಿರೀಶ್ ಮಣ್ಣಿಕೆರೆ : 7353704367