ಇತ್ತೀಚೆಗೆ ಹಾಸನದ ಮಲ್ನಾಡ್ ಕಾಲೇಜ್ ಆಫ್ ಎಂಜಿನಿಯರಿಂಗ್ ಆವರಣದಲ್ಲಿ ಶೋರಿನ್ ಕೈ ಇಂಡಿಯಾ ವತಿಯಿಂದ 24ನೇ ರಾಷ್ಟ್ರಮಟ್ಟದ ಓಪನ್ ಕರಾಟೆ ಪಂದ್ಯಾವಳಿಯಲ್ಲಿ ಮೂಡಿಗೆರೆ ಬಿಜಿಎಸ್ ಶಾಲೆ ವಿದ್ಯಾರ್ಥಿಗಳು ಭಾಗವಹಿಸಿ ಕಥ ಹಾಗೂ ಕಮಿತೆ ಎರಡೂ ವಿಭಾಗದಲ್ಲಿ ಅತೀ ಹೆಚ್ಚು ಪ್ರಥಮ ಸ್ಥಾನ ಗಳಿಸುವ ಮೂಲಕ ಸಮಗ್ರ ತಂಡ ಪ್ರಶಸ್ತಿ ಪಡೆದುಕೊಂಡಿದೆ.
ಈ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ ಪೀಠಾಧ್ಯಕ್ಷ ಪರಮಪೂಜ್ಯ ಜಗದ್ಗುರು ಶ್ರೀ ನಿರ್ಮಿಲಾನಂದನಾಥ ಸ್ವಾಮೀಜಿ, ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.