October 5, 2024

ಮಾ.1ರಂದು ಮೂಡಿಗೆರೆ ವಿಧಾನಸಭೆ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದ್ದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೂಡಿಗೆರೆ ವಿಧಾನಸಭೆ ಕ್ಷೇತ್ರದಲ್ಲಿ ನಾಳೆ ರಥಯಾತ್ರೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆಂದು ಮಾಜಿ ಸಚಿವ ಬಿ.ಬಿ.ನಿಂಗಯ್ಯ ಹೇಳಿದರು.

ಬಿ.ಬಿ. ನಿಂಗಯ್ಯ

ಅವರು ಸೋಮವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ 9 ಗಂಟೆಗೆ ತೇಗೂರು ಗ್ರಾಮದಿಂದ ಕದ್ರಿಮಿದ್ರಿ ಗ್ರಾಮಕ್ಕೆ ಬೈಕ್ ಮೂಲಕ ರ‍್ಯಾಲಿ ಪ್ರವೇಶಿಸುವುದು. ಬಳಿಕ ಹಾದಿಹಳ್ಳಿ ಮೂಲಕ ಮಳಲೂರು ಗ್ರಾಮ, ಕೆ.ಆರ್.ಪೇಟೆ, ತಿರುಗಣ, ನೆರಡಿ, ವಳಗೇರಹಳ್ಳಿ, ತೊಂಡವಳ್ಳಿ, ಆಲದಗುಡ್ಡೆ, ವಸ್ತಾರೆ, ಕೂದುವಳ್ಳಿ, ಆಲ್ದೂರು ಗ್ರಾಮಕ್ಕೆ ಮಧ್ಯಾಹ್ನ 1.15ಗಂಟೆಗೆ ಆಗಮಿಸಲಿದೆ. ಬಳಿಕ ಗುಲ್ಲನಪೇಟೆ ಮೂಲಕ ಹಾಂದಿ ಗ್ರಾಮದಿಂದ ಮೂಡಿಗೆರೆ ಪಟ್ಟಣದ ಕೊಲ್ಲಿಬೈಲ್‌ಗೆ ಆಗಮಿಸಲಿದೆ. ಅಲ್ಲಿಂದ ಬೈಕ್ ರ‍್ಯಾಲಿ ಮೂಲಕ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಿ ಸಂಜೆ 5.30ಗಂಟೆಗೆ ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಬೃಹತ್ ಸಭೆ ನಡೆಯಲಿದೆ ಎಂದು ಹೇಳಿದರು.

 

ಕಾರ್ಯಕ್ರಮಕ್ಕೆ ಕೇಂದ್ರ ಮಾಜಿ ಸಚಿವ, ಜೆ.ಡಿ.ಎಸ್.ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಎಂಎಲ್‌ಸಿ ಎಸ್.ಎಲ್.ಭೋಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್ ಸೇರಿದಂತೆ ಅನೇಕ ನಾಯಕರು ಭಾಗವಹಿಸಲಿದ್ದಾರೆ.

ಎಲ್ಲಾ ಜೆಡಿಎಸ್ ಹಿರಿಯ ಮುಖಂಡರು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧ್ಯಕ್ಷರು ಪದಾಧಿಕಾರಿಗಳು, ಬೂತ್ ಮತ್ತು ವಿವಿಧ ಘಟಕದ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.

ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್, ಕ್ಷೇತ್ರ ಸಮಿತಿ ಅಧ್ಯಕ್ಷ ಡಿ.ಜೆ.ಸುರೇಶ್, ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಲೋಹಿತ್ ಉಪಸ್ಥಿತರಿದ್ದರು.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ