ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿಯಲ್ಲಿ ಮೂಡಿಗೆರೆಯ ಸಂಚಿಹೊನ್ನಮ್ಮ ಮಹಿಳಾ ಮಂಡಳಿ, ಆಶ್ರಯ ಸಾಮಾಜಿಕ ಸೇವಾ ಸಂಸ್ಥೆ, ಆಧಿಶಕ್ತಿ ಮಹಿಳಾ ಪತ್ತಿನ ಸಹಕಾರ ಸಂಘ, ಕನ್ನಡ ಜಾನಪದ ಪರಿಷತ್ತು, ಕರ್ನಾಟಕ ರಕ್ಷಣಾ ವೇದಿಕೆ, ಚೈತನ್ಯ ಪರಿಶಿಷ್ಟ ಜಾತಿ ಮಹಿಳಾ ಪತ್ತಿನ ಸಹಕಾರ ಸಂಘ, ಸ್ಥಳೀಯ ಸಂಘಸಂಸ್ಥೆಗಳ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
ಶಾಸಕರಾದ ಎಂ.ಪಿ. ಕುಮಾರಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಮಹಿಳೆಯರಿಗೆ ಹಿತನುಡಿಗಳನ್ನು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಊರುಬಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕೆ.ಪಿ. ಭಾರತಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್. ಅನಂತು, ಸಂಚಿಹೊನ್ನಮ್ಮ ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಕಮಲಾಕ್ಷಮ್ಮ, ಜಾನಪದ ಪರಿಷತ್ ತಾಲ್ಲೂಕು ಅಧ್ಯಕ್ಷೆ ಶ್ರೀಮತಿ ಹೆಚ್.ಟಿ. ಭಾನುಮತಿ, ಮೂಡಿಗೆರೆ ಪಟ್ಟಣ ಪಂಚಾಯಿತಿ ಸದಸ್ಯ ರಮೇಶ್ ಹೊಸಕೆರೆ, ಊರುಬಗೆ ಗ್ರಾಮ ಪಂಚಾಯಿತಿ ಸದಸ್ಯರಾದ ಸಂತೋಷ್ ಕುಂಬರಡಿ, ಶ್ರೀಮತಿ ಪುಷ್ಪ, ಕ.ರ.ವೇ ಅಧ್ಯಕ್ಷರಾದ ಪ್ರಸನ್ನ ದಾರದಹಳ್ಳಿ, ಚಂದ್ರೇಗೌಡ, ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಹೆಚ್.ಬಿ. ಸರೋಜ, ಊರುಬಗೆ ಗ್ರಾಮ ಪಂಚಾಯಿತಿ ಪಿ.ಡಿ.ಓ. ಇಂತೇಶ್, ಚೈತನ್ಯ ಸಹಕಾರ ಸಂಘದ ಉಪಾಧ್ಯಕ್ಷೆ ನೀಲಾ ಅನಂತು, ಸಿ.ಇ.ಓ. ಯೋಗೇಶ್ ಮುಂತಾದವರು ಉಪಸ್ಥಿತರಿದ್ದರು.