October 5, 2024

ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಾಧನೆಗಳ ಪ್ರಚಾರ ನಡೆಸಲು ಮತ್ತು ಮುಂಬರುವ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿ.ಜೆ.ಪಿ. ಪಕ್ಷ ರಾಜ್ಯದಾದ್ಯಂತ ವಿಜಯಸಂಕಲ್ಪ ಯಾತ್ರೆಯನ್ನು ಹಮ್ಮಿಕೊಂಡಿದೆ. ಅದರ ಅಂಗವಾಗಿ ನಾಳೆ ಮಾರ್ಚ್ 16ರಂದು ಮೂಡಿಗೆರೆ ಪಟ್ಟಣದಲ್ಲಿ ಬಿ.ಜೆ.ಪಿ. ಪಕ್ಷದ ವಿಜಯಸಂಕಲ್ಪ ಯಾತ್ರೆ ನಿಗದಿಯಾಗಿದೆ.

ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ, ಜಿಲ್ಲೆಯ ಎಲ್ಲಾ ಬಿ.ಜೆ.ಪಿ. ಶಾಸಕರುಗಳು ವಿಜಯಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿಲಿದ್ದಾರೆ. ಗುರುವಾರ ಮಧ್ಯಾಹ್ನ 2 ಗಂಟೆಗೆ ಪಟ್ಟಣದ ಹೊರವಲಯದ ಕೊಲ್ಲಿಬೈಲ್ ಮೂಲಕ ಯಾತ್ರೆ ಪ್ರವೇಶಿಸಲಿದ್ದು, ಬಸ್‍ನಿಲ್ದಾಣ ವೃತ್ತ, ಎಂ.ಜಿ.ರಸ್ತೆ ಸೇರಿದಂತೆ ಪ್ರಮುಖ ರಸ್ತೆಯಲ್ಲಿ ರೋಡ್‍ಶೋ, ಕಲಾ ತಂಡಗಳ ಮೂಲಕ ಮೆರವಣಿಗೆ ನಡೆಯಲಿದೆ.

ಯಾತ್ರೆಯ ಮೇಲೆ ಬಂಡಾಯದ ಕಾರ್ಮೋಡ
ಮೂಡಿಗೆರೆಯಲ್ಲಿ ಹಮ್ಮಿಕೊಂಡಿರುವ ವಿಜಯಸಂಕಲ್ಪ ಯಾತ್ರೆಯ ಮೇಲೆ ಬಂಡಾಯದ ಕಾರ್ಮೋಡ ಕವಿದಿದೆ. ಕ್ಷೇತ್ರದಲ್ಲಿ ಶಾಸಕ ಕುಮಾರಸ್ವಾಮಿಯವರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಬಾರದು ಎಂದು ಕ್ಷೇತ್ರದ ದೊಡ್ಡ ಸಂಖ್ಯೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಬಂಡಾಯದ ಬಾವುಟ ಹಾರಿಸಿದ್ದಾರೆ.

“ಎಂ.ಪಿ.ಕೆ. ಹಠಾವೋ, ಬಿ.ಜೆ.ಪಿ. ಬಚಾವೋ” ಎಂಬ ಘೋಷಣೆಯೊಂದಿಗೆ ಮೂಡಿಗೆರೆ ಕ್ಷೇತ್ರದ ದೊಡ್ಡ ಸಂಖ್ಯೆಯ ಮೂಲ ಬಿ.ಜೆ.ಪಿ.ಗರು, ವಿವಿಧ ಹೋಬಳಿಗಳ ಅಧ್ಯಕ್ಷರು, ಮಂಡಲ ಸಮಿತಿಯ ಪದಾಧಿಕಾರಿಗಳು, ಬೂತ್ ಮಟ್ಟದ ಪ್ರಮುಖ ಕಾರ್ಯಕರ್ತರು ಶಾಸಕ ಎಂ.ಪಿ. ಕುಮಾರಸ್ವಾಮಿಯವರ ವಿರುದ್ಧ ದೊಡ್ಡ ಮಟ್ಟದಲ್ಲಿ ತಿರುಗಿ ಬಿದ್ದಿದ್ದಾರೆ.

ಇಷ್ಟು ದಿನ ಬೂದಿಮುಚ್ಚಿದ ಕೆಂಡದಂತಿದ್ದ ಮತ್ತು ತೆರೆಮರೆಯಲ್ಲೇ ನಡೆಯುತ್ತಿದ್ದ ಭಿನ್ನಾಭಿಪ್ರಾಯ ಇದೀಗ ಸ್ಪೋಟಗೊಳ್ಳುವ ಹಂತ ತಲುಪಿದೆ. ಕಳೆದ ಒಂದು ವಾರದಿಂದ ಕುಮಾರಸ್ವಾಮಿ ವಿರೋಧಿ ಬಣದ ಕಾರ್ಯಕರ್ತರು ಸತತ ಸಭೆಗಳನ್ನು ನಡೆಸುತ್ತಿದ್ದಾರೆ. ಕುಮಾರಸ್ವಾಮಿಯವರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಬಾರದು, ಹಾಗೊಂದು ವೇಳೆ ಅವರಿಗೆ ಟಿಕೆಟ್ ನೀಡಿದರೆ ನಮ್ಮ ದಾರಿ ನಮಗೆ ಎನ್ನುವ ರೀತಿಯ ತೀರ್ಮಾನಗಳಿಗೆ ಬರುತ್ತಿದ್ದಾರೆ.

ಗುರುವಾರ ವಿಜಯಸಂಕಲ್ಪ ಯಾತ್ರೆಯ ಸಂದರ್ಭದಲ್ಲಿ ಕುಮಾರಸ್ವಾಮಿಯವರ ವಿರುದ್ಧ ಬಣದ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಮೂಡಿಗೆರೆ ಪಟ್ಟಣದ ಪ್ರೀತಂ ಕಲ್ಯಾಣ ಮಂಟಪದಲ್ಲಿ ಬೃಹತ್ ಸಭೆಯನ್ನು ನಡೆಸಿ ಯಡಿಯೂರಪ್ಪ ಸೇರಿದಂತೆ ಪಕ್ಷದ ವರಿಷ್ಟರಿಗೆ ತಮ್ಮ ಸ್ಪಷ್ಟ ಸಂದೇಶ ನೀಡಲು ತಯಾರಿ ನಡೆಸಿದ್ದಾರೆ. ನಾಳೆ ಮೂಡಿಗೆರೆಯಲ್ಲಿ ಬಿ.ಜೆ.ಪಿ. ಬಣರಾಜಕೀಯ ಬಹಿರಂಗವಾಗಿ ಪ್ರಕಟವಾಗಲಿದ್ದು, ಇದು ಪಕ್ಷದ ವರಿಷ್ಟರನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆಯಿದೆ.

ನಾಳಿನ ವಿಜಯಸಂಕಲ್ಪ ಯಾತ್ರೆ ಕಾರ್ಯಕ್ರಮ ಕುಮಾರಸ್ವಾಮಿ ಪರ ಮತ್ತು ವಿರುದ್ಧ ಬಣಗಳ ನಡುವಿನ ಶಕ್ತಿಪ್ರದರ್ಶನದ ವೇದಿಕೆಯಾಗುವ ಎಲ್ಲಾ ಸಾಧ್ಯತೆಗಳು ಇವೆ. ಹಾಗಾಗಿ ನಾಳಿನ ಸಭೆ ಬಿ.ಜೆ.ಪಿ. ಮಾತ್ರವಲ್ಲ ಇತರ ಪಕ್ಷಗಳ ಮತ್ತು ಕ್ಷೇತ್ರದ ಸಾರ್ವಜನಿಕರ ಗಮನ ಸೆಳೆದಿದೆ.

 

ಮರದಿಂದ ಬಿದ್ದು ಕಾರ್ಮಿಕ ದುರ್ಮರಣ

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ