ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿ ಗುತ್ತಿಹಳ್ಳಿ ಗ್ರಾಮದಲ್ಲಿ ಕಾಡಾನೆ ಹಾವಳಿಯಿಂದ ಅಪಾರ ಪ್ರಮಾಣ ಬೆಳೆ ಹಾನಿಯಾಗಿದೆ.
ಗ್ರಾಮದ ಪ್ರವೀಣ್ ಎಂಬುವವರ ಕೃಷಿಭೂಮಿಗೆ ಮಂಗಳವಾರ ರಾತ್ರಿ ದಾಳಿ ಮಾಡಿರುವ ಕಾಡಾನೆ ಅಡಿಕೆ ಮರ, ಕಾಫಿ ಗಿಡಗಳನ್ನು ತುಳಿದು ನಜ್ಜುಗುಜ್ಜಾಗಿಸಿದೆ.
ಕಳೆದ ಒಂದು ವಾರದಿಂದ ಕಾಡಾನೆ ಗುತ್ತಿಹಳ್ಳಿಯಲ್ಲಿ ಬೀಡುಬಿಟ್ಟಿದ್ದು ಅರಣ್ಯ ಇಲಾಖೆ ಈ ಬಗ್ಗೆ ಗಮನ ಹರಿಸಿ ಕಾಡಾನೆಯನ್ನು ಕಾಡಿಗಟ್ಟಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.