ಸಿಡಿಲು ಬಡಿದು ಓರ್ವ ಸಾವನಪ್ಪಿದ್ದು ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ.
ಮುಖೇಶ್ (40) ಸಿಡಿಲು ಬಡಿದು ಸಾವನ್ನಪ್ಪಿರುವ ಯುವಕ.
ಕಡೂರು ತಾಲೂಕಿನ ಯಗಟಿಪುರದಲ್ಲಿ ದುರ್ಘಟನೆ ನಡೆದಿದೆ.
ದೇವಸ್ಥಾನಕ್ಕೆ ಆಗಮಿಸಿದ್ದ ಮುಖೇಶ್ ದೇವಸ್ಥಾನದ ಹೊರಾಂಗಣದಲ್ಲಿ ನಿಂತಿದ್ದಾಗ ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮುಖೇಶ್ ತರೀಕೆರೆ ತಾಲೂಕಿನ ಬಾವಿಕೆರೆಯ ಗಂಜೀಗೆರೆ ಮೂಲದವರು ಎಂದು ತಿಳಿದುಬಂದಿದೆ.
ನಾಲ್ವರು ಗಾಯಳುಗಳಿಗೆ ಕಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.