ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಆಡಳಿತ ಕಾಂಗ್ರೇಸ್ ಪಕ್ಷ ತನ್ನ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರಿದಂತೆ ಮೂವರ ಹೆಸರನ್ನು ಅಂತಿಮಗೊಳಿಸಿ ಪ್ರಕಟಿಸಿದೆ.
ಜಗದೀಶ್ ಶೆಟ್ಟರ್, ಸಚಿವ ಬೋಸರಾಜ್ ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರ ಹೆಸರನ್ನು ಕಾಂಗ್ರೇಸ್ ಘೋಷಣೆ ಮಾಡಿದೆ. ಮೂವರು ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಮೂರು ಸದಸ್ಯರ ಆಯ್ಕೆ ನಡೆಯಲಿದೆ. ಮೂರು ಸ್ಥಾನಗಳಿಗೆ ಪ್ರತ್ಯೇಕ ಮತದಾನ ಇರುವುದರಿಂದ ವಿಧಾನಸಭೆಯಲ್ಲಿ ಸ್ಪಷ್ಟ ಬಹುಮತ ಹೊಂದಿರುವ ಕಾಂಗ್ರೇಸ್ ಮೂರೂ ಸ್ಥಾನಗಳನ್ನು ಅನಾಯಾಸವಾಗಿ ಗೆಲ್ಲಲ್ಲಿದ್ದು, ವಿರೋಧ ಪಕ್ಷಗಳು ತಮ್ಮ ಅಭ್ಯರ್ಥಿಯನ್ನು ಕಣ್ಣಕ್ಕಿಳಿಸುತ್ತವೆಯೋ ಅಥವಾ ಅವಿರೋಧ ಆಯ್ಕೆ ನಡೆಯುತ್ತದೆಯೋ ಎಂಬುದು ಕಾದು ನೋಡಬೇಕು.