ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ(ಸಿ.ಇ.ಓ) ಆಗಿ ಡಾ. ಗೋಪಾಲಕೃಷ್ಣ ಬಿ. ಇವರನ್ನು ಸರ್ಕಾರ ನೇಮಕ ಮಾಡಿದೆ.
ಜಿ.ಪ್ರಭು ಅವರ ವರ್ಗಾವಣೆಯಿಂದ ತೆರವಾಗಿದ್ದ ಜಿ.ಪಂ. ಸಿಇಓ ಆಗಿ ನೇಮಕ ಆಗಿರುವ ಡಾ. ಗೋಪಾಲಕೃಷ್ಣ ಈ ಹಿಂದೆ ಹುಬ್ಬಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.
2018ನೇ ಬ್ಯಾಚ್ ನ ಯುವ ಐ.ಎ.ಎಸ್. ಅಧಿಕಾರಿಯಾಗಿರುವ ಡಾ. ಗೋಪಾಲಕೃಷ್ಣ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸಿ ನಂತರ ಐ.ಎ.ಎಸ್. ಪರೀಕ್ಷೆಯಲ್ಲಿ ತೇರ್ಗಡೆಹೊಂದಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿ ಒಳ್ಳೆಯ ಹೆಸರು ಮಾಡಿದ್ದರು. ಇದೀಗ ಚಿಕ್ಕಮಗಳೂರು ಜಿ.ಪಂ. ಕಾರ್ಯನಿರ್ವಹಣಾಧಿಕಾರಿಯಾಗಿ ನೇಮಕವಾಗಿದ್ದಾರೆ.
ಹಾಗೆಯೇ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾಗಿದ್ದ ಬಿ.ಆರ್.ರೂಪಾ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಹಾವೇರಿ ಜಿ.ಪಂ. ಸಿ.ಇ.ಓ. ಆಗಿದ್ದ ನಾರಾಯಣ ಕನಕ ರೆಡ್ಡಿಯವರನ್ನು ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.