October 5, 2024

ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್, ಬಿ ವಿ ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೆಷನ್, ಶ್ರೀ ಕೃಷ್ಣ ದಂತ ಚಿಕಿತ್ಸಾ ಕೇಂದ್ರ  ಹಾಗೂ ಸಮುದಾಯ ದಂತ ವಿಭಾಗ ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ,ದೇರಳಕಟ್ಟೆ  ಮಂಗಳೂರು ಇವರ  ಸಂಯುಕ್ತ ಆಶ್ರಯದಲ್ಲಿ  ಉಚಿತ ದಂತ ಚಿಕಿತ್ಸಾ ಶಿಬಿರ ಮಂಗಳವಾರ  ಬಣಕಲ್ ಸಾಯಿಕೃಷ್ಣ ಆಸ್ಪತ್ರೆಯಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಣಕಲ್ ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ಪಿ ವಾಸುದೇವ  ಸಾಯಿಕೃಷ್ಣ ಆಸ್ಪತ್ರೆಯು ಬಣಕಲ್ ಭಾಗದ ಜನರಿಗೆ ಆರೋಗ್ಯ ಸಂಜೀವಿನಿಯಾಗಿದೆ. ಬಣಕಲ್ ಸುತ್ತಲಿನ ಊರಿನಲ್ಲಿ ಯಾವುದೇ ಅಪಘಾತಗಳು ನಡೆದಾಗ ತುರ್ತು ಚಿಕಿತ್ಸೆಗೆ ಅನುಕೂಲವಾಗಿದೆ. ಜೊತೆಗೆ ಇಂತಹ ಶಿಬಿರವು ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಸಹಕಾರಿಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಣಕಲ್ ಗ್ರಾ ಪಂ ಅಧ್ಯಕ್ಷರಾದ ಶ್ರೀಮತಿ ಅತಿಕಾ ಬಾನು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿದ ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯ ಶಿಬಿರದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಮುದಾಯ ದಂತ ವಿಭಾಗ ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆಯ ಡಾ.ಪ್ರಮಾದ ಪ್ರಭಾಕರ್, ದಂತ ಚಿಕಿತ್ಸಾ ವಿಭಾಗದ ಸಂಪರ್ಕಧಿಕಾರಿ ಭರತ್ ಕುಮಾರ್, ಸಾಯಿಕೃಷ್ಣ ಹೆಲ್ತ್ ಸೆಂಟರ್ ಇದರ ನಿರ್ದೇಶಕರಾದ ಶ್ರೀಮತಿ ಭವ್ಯ ನವೀನ್, ಶ್ರೀ ಕೃಷ್ಣ ಆಸ್ಪತ್ರೆಯ ದಂತ ವೈದ್ಯಾಧಿಕಾರಿ ಡಾ.ಪ್ರಕೃತಿ ಶೆಟ್ಟಿ, ಬಣಕಲ್ ಕ್ರೈಸ್ತರ ಸಂಘದ ಅಧ್ಯಕ್ಷರಾದ ಮೆಲ್ವಿನ್ ಲಸ್ರಾದೊ,  ಶ್ರೀ ಕೃಷ್ಣ ಆಸ್ಪತ್ರೆಯ ಆಡಳಿತಾಧಿಕಾರಿ ಶ್ರೀಮತಿ ಜ್ಯೋತಿ ವಿ ಸ್ವರೂಪ್, ಸಾಯಿಕೃಷ್ಣ ಹೆಲ್ತ್ ಸೆಂಟರ್ ನ ವೈದ್ಯಾಧಿಕಾರಿಗಳಾದ ಡಾ.ಮದನ್ ,ಡಾ.ಅಜಿತ್ ಹರಿ, ಡಾ.ಮೌಲ್ಯ, ಸಿಬ್ಬಂದಿಗಳಾದ ಗಣೇಶ್, ಅನಂತ್ ಪ್ರಸಾದ್, ಹೈದರ್ ಅಲಿ  ಮತ್ತಿತರರು ಉಪಸ್ಥಿತರಿದ್ದರು.

ಸುಮಾರು 150 ಕ್ಕೂ ಅಧಿಕ ಸಾರ್ವಜನಿಕರು ಪಾಲ್ಗೊಂಡು ಶಿಬಿರದ ಪ್ರಯೋಜನ ಪಡೆದುಕೊಂಡರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ