October 5, 2024

ಮೂಡಿಗೆರೆ ತಾಲ್ಲೂಕಿನ ಬಣಕಲ್ ಪಟ್ಟಣದಲ್ಲಿ ಒಂದೇ ರಾತ್ರಿ ಮೂರು ಅಂಗಡಿಗಳಲ್ಲಿ ಸರಣಿ ಕಳ್ಳತನ ಮಾಡಿರುವ ಘಟನೆ ನಡೆದಿದೆ.

ಬಣಕಲ್ ಮುಖ್ಯ ರಸ್ತೆಯಲ್ಲಿರುವ ಮಹೇಶ್ ಸಂಭ್ರಮ್ ಅವರ ಬಿಲ್ಡಿಂಗ್ ನಲ್ಲಿ ಇರುವ ಮೊಬೈಲ್ ಅಂಗಡಿ, ಬಟ್ಟೆ ಅಂಗಡಿ, ದಿನಸಿ ಅಂಗಡಿಗಳಲ್ಲಿ ರಾತ್ರೋರಾತ್ರಿ ಕಳ್ಳತನ ಮಾಡಲಾಗಿದೆ. ಅಂಗಡಿಗಳ ಹಿಂದೆ ಶೀಟ್ ಒಡೆದು, ಶೆಟರ್ ಮುರಿದು ಸರಣಿ ಕಳ್ಳತನ ಮಾಡಲಾಗಿದೆ.

ಬಣಕಲ್ ಪಟ್ಟಣದ ಶ್ರೀ ಜಯ್ ಗುರು ಗಾರ್ಮೆಂಟ್ಸ್, ಯುನಿಕ್ಸ್ ಮೊಬೈಲ್ ಅಂಗಡಿ ಮತ್ತು ಮಲ್ನಾಡ್ ಪ್ರಾವಿಜನ್ ಸ್ಟೋರ್ ಅಂಗಡಿಗಳಲ್ಲಿ ಕಳ್ಳತನ ಮಾಡಲಾಗಿದೆ.

ಖದೀಮರು ಲಕ್ಷಾಂತರ ಮೌಲ್ಯದ ಮೊಬೈಲ್ ಹಾಗೂ ಬಟ್ಟೆ ಮತ್ತು ಹಣವನ್ನು ಕಳ್ಳತನ ಮಾಡಿದ್ದಾರೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಶ್ವಾನದಳವನ್ನು ಸ್ಥಳಕ್ಕೆ ತಂದು ಪರಿಶೀಲನೆ ನಡೆಸಲಾಗುತ್ತಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ