ಚಿಕ್ಕಮಗಳೂರು ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಮಾತೆ ವಿಕ್ರಂ ಅವರನ್ನು ನೇಮಕ ಮಾಡಲಾಗಿದೆ.
ಜಿಲ್ಲೆಯಲ್ಲಿ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಉಮಾ ಪ್ರಶಾಂತ್ ಅವರನ್ನು ದಾವಣಗೆರೆ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ತೆರವಾದ ಸ್ಥಾನಕ್ಕೆ ಯುವ ಐಪಿಎಸ್ ಅಧಿಕಾರಿ ಅಮಾತೆ ವಿಕ್ರಂ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
2021ನೇ ಬ್ಯಾಚ್ ಅಧಿಕಾರಿಯಾಗಿರುವ ಅಮಾತೆ ವಿಕ್ರಂ ಅವರು ಈ ಹಿಂದೆ ರಾಜ್ಯ ಗುಪ್ತಚರ ಇಲಾಖೆ, ಬೆಳಗಾವಿ, ಮೈಸೂರು, ಬೆಂಗಳೂರು ಮತ್ತು ಮಂಗಳೂರಿನಲ್ಲಿ ಕಾರ್ಯನಿರ್ವಹಿಸಿದ್ದರು.
ತಮ್ಮ ಉತ್ತಮ ಸೇವೆಗಾಗಿ ಮುಖ್ಯಮಂತ್ರಿಗಳ ಪೊಲೀಸ್ ಪದಕ ಪಡೆದಿದ್ದರು.