October 5, 2024

ಕಾಡಾನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಒಂಟಿಸಲಗ ಅಟ್ಟಾಡಿಸಿ ಕೊಂದು ಹಾಕಿರುವ ಘಟನೆ ಸುಂಠಿಕೊಪ್ಪದಲ್ಲಿ ನಡೆದಿದೆ.

ಮಡಿಕೆರೆ ಸಮೀಪದ ಸುಂಟಿಕೊಪ್ಪದಲ್ಲಿ ಕಾಡಾನೆಗಳನ್ನು ಕಾಡಾಗಟ್ಟುವ ಕಾರ್ಯಾಚರಣೆ ನಡೆಸುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಅರಣ್ಯ ಸಿಬ್ಬಂದಿ ಗಿರೀಶ್ (35 ವರ್ಷ) ಕಾಡಾನೆಗೆ ಬಲಿಯಾದವರು.

ಇಂದು ಬೆಳಗ್ಗೆಯಿಂದ ಒಂಟಿಸಲಗವೊಂದು ಇಬ್ಬರ ಮೇಲೆ ದಾಳಿ ನಡೆಸಿ ಗಾಯಗೊಳಿಸಿತ್ತು.

ಆ ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಸಲು 20 ಮಂದಿ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದರು.

ಆಗ ಕಾಡಾನೆ ಅರಣ್ಯ ಸಿಬ್ಬಂದಿಯ ಮೇಲೆ ಎರಗಿ ಬಂದಿದ್ದು ಗಿರೀಶ್ ಅವರ ಮೇಲೆ ದಾಳಿ ನಡೆಸಿತ್ತು. ತೀವ್ರವಾಗಿ ಗಾಯಗೊಂಡಿದ್ದ ಗಿರೀಶ್ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.

ಕಳೆದ ನಾಲ್ಕು ದಿನಗಳಲ್ಲಿ ಮೂರನೇ ಜೀವ ಕಾಡಾನೆಗೆ ಬಲಿಯಾಗಿದೆ. ಒಟ್ಟಾರೆ ಕಾಡಾನೆಯಿಂದ ಸಾವಿನ ಸರಣಿ ನಿಲ್ಲದಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ