ಚಿಕ್ಕಮಗಳೂರಿನ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಭಾ ಭವನದಲ್ಲಿ ಸೆ.25ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೆ.ಜೆ.ಜಾರ್ಜ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆ ಆಯೋಜಿಸಲಾಗಿದೆ.
ಸಭೆಯಲ್ಲಿ ಮೂಡಿಗೆರೆ ತಾಲೂಕಿನ ಸಾರ್ವಜನಿಕರು ತಮ್ಮ ಅಹವಾಲು ಸಲ್ಲಿಸಿ ಸೂಕ್ತ ಪರಿಹಾರ ಕಂಡುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದು ಮೂಡಿಗೆರೆ ತಹಸೀಲ್ದಾರ್ ವೈ.ತಿಪ್ಪೇಸ್ವಾಮಿ ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಹವಾಲು ಅರ್ಜಿಯನ್ನು ಮೂಡಿಗೆರೆ ತಾಲೂಕು ಕಚೇರಿ ಹಾಗೂ ತಾ.ಪಂ ಕಚೇರಿಯಲ್ಲಿ ಸೆ.23 ಸಂಜೆಯೊಳಗೆ ಕಚೇರಿ ಸಮಯದಲ್ಲಿ ಸಲ್ಲಿಸತಕ್ಕದ್ದು. ವೈಯಕ್ತಿಕ ಅಹವಾಲು ಸಲ್ಲಿಸಲು ಒಬ್ಬರಿಗೆ, ಸಾರ್ವಜನಿಕವಾಗಿ ಅಹವಾಲು ಸಲ್ಲಿಸಲು ಇಬ್ಬರಿಗೆ ಮಾತ್ರ ಅವಕಾಶ ನೀಡಲಾಗುವುದು. ಅರ್ಜಿ ನೀಡಿದವರು ಟೋಕನ್ ಪಡೆದುಕೊಳ್ಳಬೇಕು. ಅಲ್ಲದೇ ಅರ್ಜಿಯಲ್ಲಿ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ನಮೂದಿಸಬೇಕೆಂದು ತಿಳಿಸಿದ್ದಾರೆ.