ವಾರದ ಹಿಂದೆ ಸಕಲೇಶಪುರ ಬಳಿ ಸಂಭವಿಸಿದ್ದ ಅಪಘಾತದಲ್ಲಿ ತಂದೆ ಮೃತಪಟ್ಟು ಮಗ ತೀವ್ರವಾಗಿ ಗಾಯಗೊಂಡಿದ್ದರು. ವಾರದ ನಂತರ ಚಿಕಿತ್ಸೆ ಫಲಕಾರಿಯಾಗದೇ ಮಗನೂ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.
ಸಕಲೇಶಪುರದ ಸುಳ್ಳಕ್ಕಿ ಎಂಬಲ್ಲಿ ಬೈಕ್ ಮತ್ತು ಟಾಟಾ ಏಸ್ ವಾಹನದ ನಡುವೆ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಬೈಕ್ ನಲ್ಲಿದ್ದ ತಂದೆ ಜಗದೀಶ್ ಕೊನೆಯುಸಿರೆಳೆದಿದ್ದರು, ಮಗ ಪ್ರೀತಂ ತೀವ್ರವಾಗಿ ಗಾಯಗೊಂಡಿದ್ದರು.
ತೀವ್ರವಾಗಿ ಗಾಯಗೊಂಡಿದ್ದ ಮಗ ಪ್ರೀತಂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಮೃತರು ಸಕಲೇಶಪುರ ತಾಲ್ಲೂಕು ಹೊಸಹಳ್ಳಿ ಗ್ರಾಮದವರಾಗಿದ್ದು, ತಂದೆ ಮಗನ ಸಾವಿನಿಂದ ಕಟುಂಬದವರ ಆಕ್ರಂಧನ ಮುಗಿಲು ಮುಟ್ಟಿದೆ.