ಸೆಪ್ಟೆಂಬರ್ 24 ರಿಂದ ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರಮಟ್ಟದ ಎನ್ ಸಿ ಸಿ ಶಿಬಿರ- ಆಲ್ ಇಂಡಿಯಾ ವಾಯು ಸೈನಿಕ್ ಕ್ಯಾಂಪ್ ಗೆ ಕರ್ನಾಟಕ ಮತ್ತು ಗೋವಾ ಡೈರಕ್ಟರೇಟ್ ನಿಂದ ಕುಮಾರಿ ಮಾನ್ಯ ಕೆಂಚೈನ್ ಡಿ.ಜೆ ಆಯ್ಕೆಯಾಗಿದ್ದಾರೆ.
ಮಾನ್ಯ ಮೂಡಿಗೆರೆ ತಾಲೂಕಿನ ದೇವವೃಂದದ ಗ್ರಾಮದ ರುಕ್ಮಿಣಿಮ್ಮ, ದಿವಂಗತ ರಂಗೇಗೌಡ ರ ಮೋಮ್ಮಗಳು. ನ್ಯಾಯಾಧೀಶರಾದ ಜಯಪ್ರಕಾಶ್ ದೇವವೃಂದ ಹಾಗೂ ವಿನುತ ಜಯಪ್ರಕಾಶ್ ರವರ ಪುತ್ರಿಯಾಗಿದ್ದಾರೆ.
ಇವರು ಶಿಬಿರದಲ್ಲಿ ಸ್ಕೀಟ್ ಶೂಟಿಂಗ್ ನಲ್ಲಿ ರಾಜ್ಯವನ್ನು ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸುತ್ತಿದ್ದಾರೆ
ಮಾನ್ಯ ಪ್ರಸ್ತುತ ಬೆಂಗಳೂರಿನ ಸೈಂಟ್ ಜೋಸೆಫ್ಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ರಾಷ್ಟ್ರಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಮಾನ್ಯ ಸಾಧನೆಗೆ ಕುಟುಂಬದವರು, ಬಂಧುಗಳು, ಗ್ರಾಮಸ್ಥರು ಮತ್ತು ಸೈಂಟ್ ಜೋಸೆಫ್ಸ್ ಶಾಲಾ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ.