ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಎನ್ ಸಿ ಸಿ ಶಿಬಿರ- ಆಲ್ ಇಂಡಿಯಾ ವಾಯು ಸೈನಿಕ್ ಕ್ಯಾಂಪ್ ನಲ್ಲಿ ಸ್ಕೀಟ್ ಶೂಟಿಂಗ್ ಸ್ಪರ್ಧೆಯಲ್ಲಿ ಕುಮಾರಿ ಮಾನ್ಯ ಕೆಂಚೈನ್ ಡಿ.ಜೆ. ಕಂಚಿನ ಪದಕ ಗಳಸಿದ್ದಾರೆ.
ಕರ್ನಾಟಕ ಮತ್ತು ಗೋವಾ ಡೈರಕ್ಟರೇಟ್ ನ್ನು ಪ್ರತಿನಿಧಿಸಿದ್ದ ಮಾನ್ಯ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದವರು.
ಮಾನ್ಯ ಬೆಂಗಳೂರಿನ ಸೈಂಟ್ ಜೋಸೆಫ್ಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಇವರು ನ್ಯಾಯಾಧೀಶರಾದ ಜಯಪ್ರಕಾಶ್ ದೇವವೃಂದ ಹಾಗೂ ವಿನುತ ಜಯಪ್ರಕಾಶ್ ರವರ ಪುತ್ರಿಯಾಗಿದ್ದಾರೆ.
ಮಾನ್ಯ ಸಾಧನೆಗೆ ಸೈಂಟ್ ಜೋಸೆಫ್ ಕಾಲೇಜು ಆಡಳಿತ ಮಂಡಳಿ ತನ್ನ ಅಭಿನಂದನೆಗಳನ್ನು ಸಲ್ಲಿಸಿದೆ. ಕುಟುಂಬದವರು ಮತ್ತು ಗ್ರಾಮಸ್ಥರು ತಮ್ಮ ಹರ್ಷ ವ್ಯಕ್ತಪಡಿಸಿದ್ದಾರೆ.