ಬೆಂಗಳೂರಿನಲ್ಲಿ ಭಾನುವಾರ ನಡೆದಾಡುವ ದೇವರ ಸೇವಾ ಟ್ರಸ್ಟ್ ರಿಜಿಸ್ಟರ್ ವತಿಯಿಂದ ಡಾ .ಎ.ಪಿ.ಜಿ ಅಬ್ದುಲ್ ಕಲಾಂ ರವರ 92 ನೇ ಜಯಂತೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮೂಡಿಗೆರೆಯ ಮೂವರು ಸಮಾಜ ಸೇವಕರನ್ನು ಗುರುತಿಸಿ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ತು ಅಕ್ಕ ಮಹಾದೇವಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೂಡಿಗೆರೆ ಯ ಸಾಮಾಜಿಕ ಸಕ್ರಿಯ ಸೇವಾ ಸಂಸ್ಥೆ ರಿಜಿಸ್ಟರ್ ಅಧ್ಯಕ್ಷರಾದ ಫಿಶ್ ಮೊನು, ಗೌರಧ್ಯಕ್ಷರಾದರಾದ ಅಬ್ದುಲ್ ರಹಿಮಾನ್ ಹಾಗೂ ಕಾಪಿನಾಡು ಸಮಾಜಸೇವಕರಾದ ಹಸೆನಾರ್ ಇವರುಗಳನ್ನು ಇವರ ಸಮಾಜ ಸೇವೆಯನ್ನು ಗುರುತಿಸಿ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು.