ನೇಪಾಳದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ಥ್ರೋಬಾಲ್ ಸ್ಪರ್ಧೆಯಲ್ಲಿ ನಮ್ಮ ಕಾಫಿನಾಡಿನ ವಿದ್ಯಾರ್ಥಿನಿ ಪ್ರತಿನಿಧಿಸುತ್ತಿದ್ದು ಚಿಕ್ಕಮಗಳೂರು ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.
ಚಿಕ್ಕಮಗಳೂರು ನಗರದ ಸೈಂಟ್ ಜೋಸೆಪ್ ಕಾಲೇಜಿನಲ್ಲಿ ದ್ವಿತೀಯಾ ಪಿ.ಯು.ಸಿ. ವ್ಯಾಸಂಗ ಮಾಡುತ್ತಿರುವ ಬಿ.ಎಸ್. ಹೃಥ್ವರಿ ಥೋಷ ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಿರುವ ವಿದ್ಯಾರ್ಥಿನಿ.
ಹೃಥ್ವರಿ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿ ಬಕ್ಕಿ ಗ್ರಾಮದ ಬಿ.ಬಿ. ಸಂಪತ್ ಕುಮಾರ್ ಮತ್ತು ಶ್ರಾವಣಿ ಅವರ ಪುತ್ರಿ. ಬಾಲ್ಯದಿಂದಲೇ ಕ್ರೀಡಾ ಸ್ಪರ್ಧೆಗಳಲ್ಲಿ ಅತೀವ ಆಸಕ್ತಿ ಬೆಳೆಸಿಕೊಂಡಿದ್ದ ಹೃಥ್ವರಿ ಇದೀಗ ಥ್ರೋಬಾಲ್ ಸ್ಫರ್ಧೆಯಲ್ಲಿ ಹೆಚ್ಚಿನ ಸಾಧನೆ ಮಾಡುತ್ತಿದ್ದಾಳೆ.
ಹೃಥ್ವರಿ ಚಿಕ್ಕಮಗಳೂರು ಜಿಲ್ಲೆ ಥ್ರೋಬಾಲ್ ತಂಡದ ನಾಯಕಿಯಾಗಿದ್ದಾರೆ. ಇದೇ ನವೆಂಬರ್ 3ರಿಂದ ಮಂಡ್ಯದಲ್ಲಿ ನಡೆಯಲಿರುವ ರಾಜ್ಯಮಟ್ಟದ ಥ್ರೋಬಾಲ್ ಸ್ಪರ್ಧೆಯಲ್ಲಿ ಜಿಲ್ಲಾ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಹೃಥ್ವರಿ ಸಾಧನೆಗೆ ಅವರ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿ ಶುಭಕೋರಿದ್ದಾರೆ.