ಮೂಡಿಗೆರೆ : ಮಾಜಿ ಸಚಿವರು, ಸಂಸದರು ಶಾಸಕರು, ಹಿರಿಯ ರಾಜಕಾರಣಿಯಾಗಿದ್ದ ನಾಡು ಕಂಡ ಮುತ್ಸದ್ದಿಗಳಲ್ಲಿ ಒಬ್ಬರಾಗಿದ್ದ ಡಿ ಬಿ ಚಂದ್ರೇಗೌಡ ಇವರ ನಿಧನಕ್ಕೆ ಮಾಜಿ ಸಂಸದರು ಮತ್ತು ಮಾಜಿ ವಿಧಾನಪರಿಷತ್ ಸದಸ್ಯ ಡಿ.ಎಂ .ಪುಟ್ಟೇಗೌಡ ಇವರು ಸಂತಾಪ ಸೂಚಿಸಿದ್ದಾರೆ.
ಅವರು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ; 1970 ನೆ ಇಸವಿಯಿಂಧ ಒಟ್ಟಾಗಿ ರಾಜ್ಯ ಮತ್ತು ರಾಷ್ಟ್ರ ರಾಜಕಾರಣ ಅಲ್ಲದೆ ಸಾರ್ವಜನಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ನಾವುಗಳು ಒಟ್ಟಾಗಿ ಸೇವೆ ಸಲ್ಲಿಸಿದ್ದು. ಪ್ರಮುಖವಾಗಿ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರು ಚಿಕ್ಕಮಗಳೂರಿನಿಂದ ಲೋಕಸಭೆಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ ಅವರ ಗೆಲುವಿಗೆ ಒಟ್ಟಾಗಿ ಕೆಲಸ ಮಾಡಿದ್ದೆವು. ಅಲ್ಲದೆ ಚಂದ್ರೇಗೌಡರು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಮಂತ್ರಿಯಾಗಿದ್ದಾಗ ಜಿಲ್ಲೆಯ ರೈತರು ಕಾಫಿ ಬೆಳೆಗಾರರ ಸಮಸ್ಯೆಗೆ ಸ್ಪಂದಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಅಭಿವೃದ್ಧಿಗೆ ತನ್ನದೇ ಕೊಡುಗೆಯನ್ನು ನೀಡಿದ್ದಾರೆ. ಚಿಕ್ಕಮಗಳೂರು ಮಾತ್ರವಲ್ಲದೆ, ತೀರ್ಥಹಳ್ಳಿ, ಬೆಂಗಳೂರು, ಶೃಂಗೇರಿ ಕ್ಷೇತ್ರಗಳಲ್ಲೂ ತಮ್ಮ ರಾಜಕೀಯದ ಛಾಪು ಮೂಡಿಸಿದ್ದು ಇವರ ಹೋರಾಟ ಅವಿಸ್ಮರಣಿಯಾಗಿದೆ. ಇವರ ನಿಧನ ರಾಷ್ಟ್ರ ರಾಜ್ಯ ಮತ್ತು ಜಿಲ್ಲೆಯ ಸಾರ್ವಜನಿಕ ಜೀವನಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.