October 5, 2024

ಮೊಬೈಲ್ ಫೋನ್‌ಗಳನ್ನು ಕಳೆದುಕೊಂಡಿದ್ದ ವಾರಸುದಾರರಿಗೆ ಸುಮಾರು 6 ಲಕ್ಷ ರೂ ಬೆಲೆಯ 60 ಮೊಬೈಲ್‌ಗಳನ್ನು ಗುರುವಾರ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ವಿತರಿಸಲಾಯಿತು.

ವಿವಿಧ ಮೊಬೈಲ್ ಕಳ್ಳತನ ಪ್ರಕರಣಗಳಲ್ಲಿ ವಾರಸುದಾರರು ನೀಡಿದ್ದ ದೂರನ್ನು ಆದರಿಸಿ ಪೊಲೀಸ್ ಇಲಾಖೆಯಿಂದ ತನಿಖೆ ನಡೆಸಿ ಪತ್ತೆ ಮಾಡಲಾದ ಈ ಮೊಬೈಲ್ ಫೋನ್‌ಗಳನ್ನು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಡಾ|| ವಿಕ್ರಮ್ ಅಮಟೆ ಅದರ ವಾರಸುದಾರರಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಇಲ್ಲಿಯವರೆಗೆ 837 ಫೋನ್‌ಗಳು ಕಳವು ಪ್ರಕರಣದಲ್ಲಿ, ಈಗಾಗಲೇ 220 ಫೋನ್‌ಗಳ ಬಗ್ಗೆ ತನಿಖೆ ನಡೆಸಿ ಈವರೆಗೆ 190 ಮೊಬೈಲ್‌ಗಳನ್ನು ಸಂಬಂಧಪಟ್ಟವರಿಗೆ ವಿತರಿಸಲಾಗಿದೆ ಎಂದರು.

ಸಾರ್ವಜನಿಕರು ನಿಮ್ಮ ಮೊಬೈಲ್‌ಗಳನ್ನು ಕಳೆದುಕೊಂಡಲ್ಲಿ ಮೊಬೈಲ್‌ ಫೋನ್‌ಗೆ ಸಂಬಂಧಿಸಿದ ದಾಖಲಾತಿಗಳು, ನಿಮ್ಮ ಗುರುತಿನ ಪುರಾವೆ ಹಾಗೂ ಪೊಲೀಸ್ ಠಾಣೆಗೆ ನೀಡಿದ ದೂರಿನ ಪ್ರತಿಯೊಂದಿಗೆ ಸಿಇಐಆರ್ ವೆಬ್ ಪೋರ್ಟಲ್  ರಲ್ಲಿ ವರದಿ ದಾಖಲಿಸಲು ಸೂಚಿಸಲಾಗಿದೆ.

ಜಿಲ್ಲಾ ಸಿಇಎನ್ ಅಪರಾಧ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಗವಿರಾಜ್, ಪಿಎಸ್‌ಐ ರಘುನಾಥ್ ಎಸ್.ವಿ, ವಿಶ್ವನಾಥ್ ಎನ್.ಸಿ ಹಾಗೂ ಸಿಬ್ಬಂದಿಗಳಾದ ಅನ್ವರ್ ಪಾಷಾ, ಹರಿಪ್ರಸಾದ್ ತಂಡ ಮೊಬೈಲ್‌ಗಳನ್ನು ಪತ್ತೆ ಮಾಡಿದೆ ಎಂದು ತಿಳಿಸಿದ್ದಾರೆ.

2022 ರ ಸೆಪ್ಟೆಂಬರ್‌ನಲ್ಲಿ ಕರ್ನಾಟಕ ರಾಜ್ಯದಲ್ಲಿ ಸಿಇಐಆರ್ ಪೋರ್ಟಲ್‌ ಅನ್ನು ಪ್ರಾರಂಭ ಮಾಡಲಾಗಿದ್ದು ದಿನಾಂಕ 17/05/2022 ರಂದು ರಾಜ್ಯವ್ಯಾಪಿಯಾಗಿ ಜಾರಿಗೆ ತರಲಾಗಿದ್ದು, ಯಾವುದೇ ವ್ಯಕ್ತಿ ಮೊಬೈಲ್ ಕಳೆದುಕೊಂಡಲ್ಲಿ ಅಥವಾ ಯಾವುದೇ ಆನ್ ಲೈನ್ ಮೋಸಕ್ಕೊಸಗಾದಲ್ಲಿ ಸಿ.ಇ.ಐ.ಆರ್. ಪೋರ್ಟಲ್ ಮೂಲಕ ದೂರು ದಾಖಲಿಸಬಹುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಎ.ಎಸ್‌ಪಿ ಕೃಷ್ಣಮೂರ್ತಿ ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ