ಮೂಡಿಗೆರೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮತ್ತು ಭಾರತೀಯ ನೌಕಾ ಸೇನೆ ಭಾರತ ಸರ್ಕಾರ ಇವರ ಸಂಯುಕ್ತ ಆಶ್ರಯದಲ್ಲಿ ಅಗ್ನಿವೀರ್ ಯೋಜನೆಯ ಬಗ್ಗೆ ಯುವಕ ಯುವತಿಯರಿಗೆ, ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ ಏರ್ಪಡಿಸಲಾಗಿದೆ.
ದಿನಾಂಕ 22/11/23 ಬುಧವಾರ ಸಮಯ 10-00 ಗoಟೆಗೆ ಮೂಡಿಗೆರೆ ತಾಲ್ಲೂಕಿನ ಬಣಕಲ್ ನಜರತ್ ಶಾಲೆಯಲ್ಲಿ ಬೆಳಿಗ್ಗೆ 11-30ರಿಂದ ಜೇಸಿ ಭವನದಲ್ಲಿ, ಮಧ್ಯಾಹ್ನ 3 ರಿಂದ ಆಲ್ದೂರಿನ ಪೂರ್ಣಪ್ರಜ್ಞಾ ಶಾಲೆಯಲ್ಲಿ ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದು ಮೂಡಿಗೆರೆ ಸೀನಿಯರ್ ಛೇಂಬರ್ ಕಾರ್ಯದರ್ಶಿ ಹೆಚ್.ಆರ್. ಪ್ರದೀಪ್ ಕುಮಾರ್ ದುಂಡುಗ ತಿಳಿಸಿದ್ದಾರೆ.
ಕಾರ್ಯಾಗಾರದಲ್ಲಿ ಭಾರತೀಯ ಸೇನೆಯ ಅಗ್ನಿವೀರ್ ಯೋಜನೆಯ ಬಗ್ಗೆ ವಿವರವಾದ ಮಾಹಿತಿ ನೀಡಲಾಗುವುದು. ಶಿಬಿರದಲ್ಲಿ ಭಾರತೀಯ ನೌಕಾಸೇನೆಯ ಲೆಫ್ಟಿನೆಂಟ್ ರಾಘವೇಂದ್ರರಾವ್ ಮತ್ತು ಅವರ ತಂಡದವರು ಮಾಹಿತಿ ನೀಡಲಿದ್ದಾರೆ.
ಆಸಕ್ತ ಯುವಕ ಯುವತಿಯರು, ವಿದ್ಯಾರ್ಥಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಬಹುದು, ಕಾರ್ಯಾಗಾರಕ್ಕೆ ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : ಬಿ.ಎನ್. ಮನಮೋಹನ್, ಸದಸ್ಯರು ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್, ಮೂಡಿಗೆರೆ : ಮೊ : 9448156915