October 5, 2024

ಗುರುವಾರ ಮೂಡಿಗೆರೆ ಬಹುಜನ ಸಮಾಜ ಪಕ್ಷದ ಕಛೇರಿಯಲ್ಲಿ  ಮೂಡಿಗೆರೆ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸಂವಿದಾನ ಶಿಲ್ಪಿ ಬಾಬಾಸಾಹೇಬ್ ಡಾ.ಬಿ. ಆರ್. ಅಂಬೇಡ್ಕರ್ ರವರ 67 ನೇ ಪರಿನಿರ್ವಾಣ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮವನ್ನು ರಾಜ್ಯ ಪ್ರಧಾನಕಾರ್ಯದರ್ಶಿ ಜಾಕಿರ್ ಹುಸೇನ್ ಉದ್ಘಾಟಿಸಿ ಮಾತನಾಡಿದರು. ಅವರು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಂಬೇಡ್ಕರ್ ಅವರ ಸೇವೆಯನ್ನು ಸ್ಮರಿಸಿದರು.

ವಿಧಾನಸಭಾ ಕ್ಷೇತ್ರದ ಬಿಎಸ್ಪಿ ಅಧ್ಯಕ್ಷ ಲೋಕವಳ್ಳಿ ರಮೇಶ್ ಅಧ್ಯಕ್ಷತೆ ವಹಿಸಿ  ದೇಶದ ದಲಿತರು ಮತ್ತು ದಮನಿತರ ಏಳಿಗೆಗೆ, ಸಂವಿದಾನದ ರಚನೆಗೆ ಅಂಬೇಡ್ಕರ್ ಅವರ ಕೊಡುಗೆ ಅತ್ಯಮೂಲ್ಯವಾಗಿದೆ ಎಂದು ಅಭಿಪ್ರಾಯಿಸಿದರು.

ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಬಿ.ಎಂ.ಶಂಕರ್. ಬಾಬಣ್ಣ. ಜಿಲ್ಲಾಕಾರ್ಯದರ್ಶಿ ಬಕ್ಕಿಮಂಜುನಾಥ. ತಾಲ್ಲೂಕು ಬ್ಯಾರಿ ಒಕ್ಕೂಟದ  ಅಧ್ಯಕ್ಷ  ಬಿ. ಹೆಚ್.ಮಹಮ್ಮದ್, ಪ್ರಧಾನ ಕಾರ್ಯದರ್ಶಿ ಮಹೇಶ್, ಶಬ್ಬೀರ್ ಅಹಮದ್, ಹಮೀದ್, ಕುಮಾರ್, ಸಂದೀಪ್, ರವಿ, ಲಕ್ಷಣ್, ದೊಡ್ಡಯ್ಯ, ಮಂಜುನಾಥ್ ಮುಂತಾದವರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ