October 5, 2024

ರಾಷ್ಟ್ರೀಯ ಆಹಾರ ಹಾಗೂ ಪೌಷ್ಠಿಕ ಭದ್ರತೆ ಯೋಜನೆ ಅಡಿಯಲ್ಲಿ ಚಿಕ್ಕಮಗಳೂರಿನಲ್ಲಿ ಕೃಷಿ ಇಲಾಖೆಯಿಂದ ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ 2023 ಕಾರ್ಯಕ್ರಮದ ಅಂಗವಾಗಿ ಬುಧವಾರ ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕಸ್ಪರ್ಧೆ ನಡೆಸಲಾಯಿತು.

ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮೂಡಿಗೆರೆ ತಾಲೂಕಿನ ಹಂತೂರು ಗ್ರಾಮದ ಕೃಷಿಕ ಮಹಿಳೆ ಶ್ರೀಮತಿ ಪುಷ್ಪಾವತಿ ಮಂಜುನಾಥ್ ಗೌಡ ಅವರು ಸಿರಿದಾನ್ಯ ಸಿಹಿ ತಿನಿಸು ವಿಭಾಗದಲ್ಲಿ ಪ್ರಥಮ ಸ್ಥಾನ, ಕಾರ ತಿನಿಸು ಖಾದ್ಯಗಳ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರಿಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಪ್ರಶಸ್ತಿ ವಿತರಿಸಿದರು.

ಶ್ರೀಮತಿ ಪುಷ್ಪಾವತಿ ಮೂಡಿಗೆರೆ ತಾಲ್ಲೂಕು ಹಂತೂರು ಗ್ರಾಮದ ಕಾಫಿ ಬೆಳೆಗಾರರಾದ ಮಂಜುನಾಥಗೌಡ ಅವರ ಪತ್ನಿ. ಇವರು ಕೃಷಿಯೊಂದಿಗೆ ವಿವಿಧ ಮಹಿಳಾ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ. ಅನೇಕ ಅಡುಗೆ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದಿದ್ದಾರೆ. ಇದೀಗ ಕೃಷಿ ಇಲಾಖೆಯಿಂದ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಬಹುಮಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ