ಮೂಡಿಗೆರೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಗರ್ ಹುಕುಂ ಸಮಿಯನ್ನು ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಸಮಿತಿಯ ಅಧ್ಯಕ್ಷರಾಗಿ ಕ್ಷೇತ್ರದ ಶಾಸಕಿ ಶ್ರೀಮತಿ ನಯನ ಮೋಟಮ್ಮ ಸದಸ್ಯರುಗಳಾಗಿ ಎ. ವಿಶ್ವನಾಥ್ ಬಿನ್ ಅಣ್ಣೇಗೌಡ ಮರಸಣಿಗೆ, ಕಳಸ ತಾಲ್ಲೂಕು, ಮಹಿಳಾ ಸದಸ್ಯರಾಗಿ ಶ್ರೀಮತಿ ಪ್ರೇಮಾ ಮಂಜುನಾಥ್, ಮಾಗಡಿ ಹ್ಯಾಂಡ್ಪೋಸ್ಟ್, ಮರ್ಲೆ, ಚಿಕ್ಕಮಗಳೂರು ತಾಲ್ಲೂಕು, ಪರಿಶಿಷ್ಟ ವರ್ಗ ಸದಸ್ಯರಾಗಿ ಹರೀಶ್ ಬಿನ್ ಸೀನಾ, ಸಬ್ಬೇನಹಳ್ಳಿ, ಮೂಡಿಗೆರೆ ತಾಲ್ಲೂಕು ಅವರನ್ನು ನೇಮಕ ಮಾಡಲಾಗಿದೆ.
ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿ ಆಯಾ ತಾಲ್ಲೂಕಿನ ತಹಸೀಲ್ದಾರ್ ರವರು ಕಾರ್ಯನಿರ್ವಹಿಸಲಿದ್ದಾರೆ.
ಈ ಸಮಿತಿಯು ಕ್ಷೇತ್ರದ ವ್ಯಾಪ್ತಿಯಲ್ಲಿ ಅಕ್ರಮ ಸಕ್ರಮ ಅಡಿಯಲ್ಲಿ ಸಲ್ಲಿಕೆಯಾಗಿರುವ ಫಾರಂ ನಂ-53 ಮತ್ತು 57 ಅರ್ಜಿಗಳನ್ನು ವಿಲೇವಾರಿ ಮಾಡಲಿದ್ದು, ಸಾವಿರಾರು ಮಂದಿ ತಾವು ಸಾಗುವಳಿ ಮಾಡಿರುವ ಸರ್ಕಾರಿ ಭೂಮಿಯ ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದು ಸಮಿತಿ ರಚನೆಯಾಗಿರುವ ಹಿನ್ನಲೆಯಲ್ಲಿ ತಮ್ಮ ಅರ್ಜಿ ವಿಲೇವಾರಿಯಾಗುವ ಬಗ್ಗೆ ಆಶಾಭಾವನೆಯಿಂದ ನಿರೀಕ್ಷಿಸುತ್ತಿದ್ದಾರೆ.