October 5, 2024

ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ನೂತನವಾಗಿ ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಲಾಗಿದ್ದು ತೇಜಸ್ವಿ ಅವರ ಆಶಯಗಳನ್ನು ಒಳಗೊಂಡಿರುವ ವಸ್ತು ಸಂಗ್ರಹಾಲಯಕ್ಕೆ ಸಾರ್ವಜನಿಕರು ವಸ್ತುಗಳನ್ನು ನೀಡಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಮತ್ತು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯ ಕಾರ್ಯದರ್ಶಿಗಳಾದ ಡಾ.ಸಿ.ರಮೇಶ್ ತಿಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ತೇಜಸ್ವಿ ಅವರ ಆಶಯಗಳನ್ನು ಒಳಗೊಂಡಿರುವ ವಸ್ತು ಸಂಗ್ರಹಾಲಯಕ್ಕೆ ಸಂಬಂಧಿಸಿದಂತೇ ಹಳೆಯ ಕಾಲದ ವಿವಿಧ ಮಾದರಿಯ ಕ್ಯಾಮರಾಗಳು, ಅಪರೂಪದ ಮೀನಿನ ಗಾಳಗಳು, ಕಂಪ್ಯೂಟರ್ ಬೆಳೆದು ಬಂದ ಹಾದಿಯನ್ನು ಬಿಂಬಿಸುವ ಅಪರೂಪದ ಕಂಪ್ಯೂಟರ್‍ಗಳು, ಇತಿಹಾಸದ ಕುರುಹುಗಳಂತಿರುವ ವಸ್ತುಗಳು ಸೇರಿದಂತೇ ಅಪರೂಪದ ವಸ್ತುಗಳು ಇದ್ದಲ್ಲಿ ಸಾರ್ವಜನಿಕರು ಕೊಟ್ಟಿಗೆಹಾರದ ಕೆ.ಪಿ,ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ ನೀಡಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ಸಂಪರ್ಕ ಸಂಖ್ಯೆ 08263200012/ 9663098873,  ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ