October 5, 2024

ನಟ ತೇಜ್ ಸಜ್ಜಾ ಮತ್ತು ನಿರ್ದೇಶಕ ಪ್ರಶಾಂತ್ ವರ್ಮಾ ಅವರ ತೆಲುಗು ಸಿನಿಮಾ ‘ಹನುಮಾನ್’  ಸಂಕ್ರಾಂತಿಗೆ ಅಂದರೆ ಜನವರಿ 12ರಂದು ತೆರೆ ಕಾಣುತ್ತಿದೆ. ಆದರೆ, ಈ ಚಿತ್ರವು ಮತ್ತೊಂದು ಕಾರಣಕ್ಕೆ ಗಮನ ಸೆಳೆಯುತ್ತಿದೆ. ಈ ಸಿನಿಮಾದ ಮಾರಾಟವಾಗುವ ಪ್ರತಿ ಟಿಕೆಟ್‌ನಿಂದ 5 ರೂಪಾಯಿಯನ್ನು ಚಿತ್ರ ತಂಡವು ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆಯಾಗಿ   ನೀಡಲಿದೆ! ಹೌದು, ಈ ವಿಷಯವನ್ನು ತೆಲುಗು ಚಿತ್ರರಂಗದ ಖ್ಯಾತ ನಟ ಚಿರಂಜೀವಿ  ಬಹಿರಂಗ ಮಾಡಿದ್ದಾರೆ.

ಜನವರಿ 7 ರಂದು ‘ಹನುಮಾನ್’ ಚಿತ್ರದ ಪ್ರಿ-ರಿಲೀಸ್ ಕಾರ್ಯಕ್ರಮವು ಹೈದರಾಬಾದ್‌ನಲ್ಲಿ ನಡೆದಿದ್ದು, ಮೆಗಾಸ್ಟಾರ್ ಚಿರಂಜೀವಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ‘ಹನುಮಾನ್’ ತಂಡವು ಪ್ರಮುಖ ಘೋಷಣೆಯನ್ನು ಮಾಡಿದೆ. ಅವರು ರಾಮಮಂದಿರ ನಿರ್ಮಾಣಕ್ಕೆ ತಮ್ಮ ಚಿತ್ರದ ಪ್ರತಿ ಟಿಕೆಟ್‌ನಿಂದ 5 ರೂ. ದೇಣಿಗೆ ನೀಡಲು ನಿರ್ಧರಿಸಿದ್ದಾರೆ. ನಾನು ತಂಡದ ಪರವಾಗಿ ಸುದ್ದಿಯನ್ನು ಪ್ರಕಟಿಸುತ್ತಿದ್ದೇನೆ. ಉದಾತ್ತ ನಿರ್ಧಾರವನ್ನು ತೆಗೆದುಕೊಂಡ ‘ಹನುಮಾನ್’ ತಂಡಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ಹೇಳಿದ್ದರು.

“ರಾಮಮಂದಿರ ನಿರ್ಮಾಣ ಇತಿಹಾಸದಲ್ಲಿ ಒಂದು ಮೈಲುಗಲ್ಲು. ರಾಮಮಂದಿರದ ಉದ್ಘಾಟನಾ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಲಾಗಿತ್ತು. ಇದೇ ತಿಂಗಳ 22ರಂದು ನಾನು ನನ್ನ ಕುಟುಂಬದೊಂದಿಗೆ ಪಾಲ್ಗೊಳ್ಳುತ್ತೇನೆʼʼ ಎಂದು ಮೆಗಾಸ್ಟಾರ್ ಚಿರಂಜೀವಿ ಅವರು ಇದೇ ವೇಳೆ ಹೇಳಿದ್ದಾರೆ.

ಟಾಲಿವುಡ್‌ನಲ್ಲಿ ಸಾಕಷ್ಟು ಸಿನಿಮಾಗಳು ಸಂಕ್ರಾಂತಿಗೆ ಬಿಡುಗಡೆಯಾಗುತ್ತಿವೆ. ಮಹೇಶ್ ಬಾಬು ಅವರ ಗುಂಟೂರು ಖಾರಂ, ವೆಂಕಟೇಶ್ ಅವರ ಸೈಂಧವ ಮತ್ತು ನಾಗಾರ್ಜನ್ ಅವರ ನಾ ಸಾಮಿ ರಂಗ ಚಿತ್ರಗಳು ಬಿಡುಗಡೆಯಾಗುತ್ತಿದ್ದು, ಈ ಚಿತ್ರಗಳಿಗೆ ಹನುಮಾನ್ ಚಿತ್ರವೂ ಪೈಪೋಟಿ ನೀಡಲಿದೆ.

ಹನುಮಾನ್ ಪ್ರಶಾಂತ್ ವರ್ಮಾ ಬರೆದು ನಿರ್ದೇಶಿಸಿದ ಸೂಪರ್ ಹೀರೋ ಚಿತ್ರವಾಗಿದೆ. ನಾಯಕನಾಗಿ ತೇಜ ಸಜ್ಜಾ ನಟಿಸಿದರೆ, ವಿನಯ್ ರೈ ಪ್ರತಿನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಅಮೃತಾ ಅಯ್ಯರ್, ವರಲಕ್ಷ್ಮಿ ಶರತ್‌ಕುಮಾರ್ ಮತ್ತು ರಾಜ್ ದೀಪಕ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿದ್ದಾರೆ.

ನಟ ಧ್ರುವ ಸರ್ಜಾ ಅವರು ಆಂಜನೇಯನ ಭಕ್ತ ಎನ್ನುವುದು ಎಲ್ಲರಿಗೂ ಗೊತ್ತಿದೆ. ಸದಾ ಹನುಮಾನ್ ಭಕ್ತಿ ಮೆರೆಯುವ ಆ್ಯಕ್ಷನ್ ಪ್ರಿನ್ಸ್ ಅವರನ್ನು ʻಹನುಮಾನ್ʼ ಸಿನಿಮಾದ ನಾಯಕ ತೇಜ ಸಜ್ಜಾ ಭೇಟಿಯಾಗಿದ್ದಾರೆ. ತಮ್ಮ ಸಿನಿಮಾದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದ ತೇಜ, ಈ ವೇಳೆ ಆಂಜನೇಯನ ಪರಮಭಕ್ತ ಧ್ರುವರನ್ನು ಭೇಟಿಯಾಗಿ ಕೆಲ‌ಕಾಲ ಸಿನಿಮಾಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ತೇಜ ಸಜ್ಜಾ ನಟಿಸಿರುವ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಸಂಕ್ರಾಂತಿ ಹಬ್ಬಕ್ಕೆ ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆ ತಮ್ಮ ಚಿತ್ರ ನೋಡುವಂತೆ ಧ್ರುವ ಸರ್ಜಾ ಅವರಿಗೆ ತೇಜ ಮನವಿ ಮಾಡಿದ್ದಾರೆ. ಈ ವೇಳೆ ʻಹನುಮಾನ್ʼ ಟ್ರೈಲರ್‌ ಅದ್ಭುತವಾಗಿದ್ದು, ತಾವು ಸಿನಿಮಾ ನೋಡುವುದಾಗಿ ಆ್ಯಕ್ಷನ್ ಪ್ರಿನ್ಸ್ ತಿಳಿಸಿದ್ದಾರೆ. ಧ್ರುವ ಅಪ್ ಕಮ್ಮಿಂಗ್ ಚಿತ್ರಗಳಾದ ಕೆಡಿ, ಮಾರ್ಟಿನ್ ಸಿನಿಮಾಗೆ ತೇಜ ಸಜ್ಜಾ ಶುಭಾಶಯ ಕೋರಿದ್ದು, ನಿಮ್ಮ ʻಪೊಗರುʼ ಸಿನಿಮಾ ತೆಲುಗು ರಂಗದಲ್ಲಿ ಸದ್ದು ಮಾಡಿತ್ತು. ನೀವು ಅದ್ಭುತವಾಗಿ ಆ್ಯಕ್ಷನ್ ಮಾಡುತ್ತೀರಾ ಎಂದು ಧ್ರುವ ನಟನೆಯನ್ನು ತೇಜ ಮೆಚ್ಚಿಕೊಂಡಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ