ಇಂದು ಸ್ಥಳೀಯ ಸಂಸ್ಥೆ ಮೂಡಿಗೆರೆ ವತಿಯಿಂದ ಮೂಡಿಗೆರೆ ತಾಲೂಕಿನ ಸ್ಕೌಟ್ ಅಂಡ್ ಗೈಡ್ ವಿದ್ಯಾರ್ಥಿಗಳಿಗೆ ಮೂಡಿಗೆರೆ ತಾಲೂಕಿನ ಆರಕ್ಷಕ ಠಾಣೆಯಲ್ಲಿ ರಸ್ತೆ ಅಪಘಾತ ಜಾಗೃತಿ ಮತ್ತು ಅಪರಾಧಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಇದರಲ್ಲಿ ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ಪೊಲೀಸರಿಂದ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮಾಹಿತಿ ಪಡೆದರು.
ಕಾರ್ಯಕ್ರಮದಲ್ಲಿ ಮೂಡಿಗೆರೆ ಸರ್ಕಲ್ ಇನ್ಸ್ ಪೆಕ್ಟರ್ ಸೋಮೆಗೌಡ, ಸಬ್ ಇನ್ಸ್ ಪೆಕ್ಟರ್ ಆದರ್ಶ, ಸ್ಕೌಟ್ ಅಂಡ್ ಗೈಡ್ಸ್ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಹಮೀದ್ ಸಬ್ಬೆನಹಳ್ಳಿ, ಸ್ಕೌಟ್ ಮಾಸ್ಟರ್ ಚೇತನ್. ರಕ್ಷಿತ್ ಬಾಳೂರು ಮತ್ತು ಗೈಡ್ಸ್ ಕ್ಯಾಪ್ಟನ್ ಅಶ್ವಿನಿ. ಹಾಗೂ ಮೂಡಿಗೆರೆ ಠಾಣೆಯ ಸಿಬ್ಬಂದಿಗಳು ಹಾಜರಿದ್ದರು.
ಸುಮಾರು 50ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಸಾರ್ವಜನಿಕರು ಭಾಗವಹಿಸಿದ್ದರು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.