ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ದೇವರಾಜ ಶೆಟ್ಟಿ ನೇಮಕಗೊಂಡಿದ್ದಾರೆ.
ರಾಜ್ಯ ಬಿ.ಜೆ.ಪಿ. ರಾಜ್ಯದ ವಿವಿಧ ಜಿಲ್ಲೆಗಳಿಗೆ ಹೊಸ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿದೆ.
ಚಿಕ್ಕಮಗಳೂರು ಜಿಲ್ಲಾ ಅಧ್ಯಕ್ಷರಾಗಿ ನೇಮಕವಾಗಿರುವ ಯುವ ಮುಖಂಡ ದೇವರಾಜ ಶೆಟ್ಟಿಯವರು ಪಕ್ಷದ ವಿವಿಧ ಹುದ್ದೆಗಳ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ. ಒಂದು ಅವಧಿಗೆ ಚಿಕ್ಕಮಗಳೂರು ನಗರಸಭೆ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಅಧ್ಯಕ್ಷ ಸ್ಥಾನಕ್ಕಾಗಿ ಹಲವರು ಆಕಾಂಕ್ಷಿಗಳಾಗಿದ್ದರು. ಅಂತಿಮವಾಗಿ ಪಕ್ಷದ ರಾಜ್ಯ ಸಮಿತಿ ದೇವರಾಜ ಶೆಟ್ಟಿಯವರನ್ನು ಆಯ್ಕೆ ಮಾಡಿದೆ.
ರಾಜ್ಯದ 39 ಜಿಲ್ಲೆಗಳ ಬಿ.ಜೆ.ಪಿ. ಜಿಲ್ಲಾಧ್ಯಕ್ಷರ ವಿವರ ಕೆಳಗಿನಂತಿದೆ.