October 5, 2024

ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಸಿನಿಮಾ ನಿರ್ದೇಶಕ ಡಿ. ಸತ್ಯ ಪ್ರಕಾಶ್ ಚಿತ್ರ ಸೆಟ್ಟೇರಿತು ಎಂದರೆ ಏನಾದರೊಂದಷ್ಟು ವಿಶೇಷತೆಗಳನ್ನು ಹೊಂದಿರುತ್ತದೆ ಎಂದು ಪ್ರೇಕ್ಷಕರು ಮತ್ತು ಚಿತ್ರೋದ್ಯಮದ ಮಂದಿ ಎದುರು ನೋಡುತ್ತಾರೆ. ಅದನ್ನು ಅಷ್ಟೇ ಜತನದಿಂದ ಕಾಪಾಡಿಕೊಂಡು ಬಂದಿದ್ದಾರೆ. ನಿರ್ದೇಶಕ ಸತ್ಯ.

ಬಹಳ ದಿನಗಳ ನಂತರ ಈಗ ಅಳೆದು ತೂಗಿ ಅತ್ಯಾಪ್ತ ಕಥೆ ಮಾಡಿಕೊಂಡು ಅದಕ್ಕೆ ಎಕ್ಸ್ ಅಂಡ್ ವೈ ಎಂದು ಶೀರ್ಷಿಕೆ ಇಟ್ಟುಕೊಂಡು ಅಖಾಡಕ್ಕೆ ಇಳಿದಿದ್ದಾರೆ. ತಮ್ಮ ಹಿಂದಿನ ಮೂರು ಚಿತ್ರಗಳಲ್ಲಿ ಮೂಡಿಸಿದ ವಿಶೇಷತೆಗಳಂತೆ ಇಲ್ಲೂ ಚಿತ್ರದ ಟೈಟಲ್ ಆರಿಸಿಕೊಂಡ ಕಥೆ, ಲೋಕೇಶನ್ಸ್, ಕಲಾವಿದರ ಆಯ್ಕೆಯಲ್ಲದೆ ತಾವೇ ಮುಖ್ಯ ಪಾತ್ರಧಾರಿಯಾಗಿ ನಟನೆಗೆ ಇಳಿದಿದ್ದಾರೆ. ಇತ್ತೀಚೆಗೆ ಜಯನಗರದ ತಮ್ಮದೇ ಕಛೇರಿಯಲ್ಲಿ ಸ್ನೇಹಿತರು, ಕಲಾವಿದರು ಹಾಗೂ ತಮ್ಮ ತಂಡದ ತಂತ್ರಜ್ಞರನ್ನೊಳಗೂಡಿ ಸತ್ಯ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಮುಹೂರ್ತ ಮುಗಿಸಿಕೊಂಡಿದ್ದಾರೆ.

ನಿರ್ಮಾಣ ಹಾಗೂ ನಿರ್ದೇಶನದ ಜೊತೆಗೆ ಸತ್ಯಪ್ರಕಾಶ್ ಹಾಗೂ ಅಥರ್ವ ಪ್ರಕಾಶ್ ನಾಯಕರಾಗಿ ಅಭಿನಯಿಸುತ್ತಿದ್ದು, ಲವಿತ್ ಛಾಯಾಗ್ರಹಣ, ವಾಸುಕಿ ವೈಭವ್ ಸಂಗೀತ ನಿರ್ದೇಶನ, ಬಿ.ಎಸ್. ಕೆಂಪರಾಜು ಅವರ ಸಂಕಲನ ಇದೆ. ವರದರಾಜ್ ಕಾಮತ್ ಕಲಾ ನಿರ್ದೇಶನ ಮಾಡುತ್ತಿದ್ದಾರೆ. ಇಡೀ ಚಿತ್ರ ಬೆಂಗಳೂರು ಮತ್ತು ಮಂಗಳೂರು ಸುತ್ತಮುತ್ತಣ ಪರಿಸರದಲ್ಲಿ ಚಿತ್ರೀಕರಿಸಲಾಗುತ್ತಿದೆ ಎಂದು ಸತ್ಯಪ್ರಕಾಶ್ ತಿಳಿಸಿದರು.

ಸತ್ಯಪ್ರಕಾಶ್ ನಮ್ಮ ಚಿಕ್ಕಮಗಳೂರು ಜಿಲ್ಲೆಯ ಕಡೂರು ಮೂಲದವರು, ಬಣ್ಣದ ಲೋಕದ ಕನಸು ಹೊತ್ತು ಮಾಯಾನಗರಿ ಬೆಂಗಳೂರು ಸೇರಿ ಅಲ್ಲಿ ತಮ್ಮ ಛಾಪು ಮೂಡಿಸುತ್ತಿದ್ದಾರೆ. ಸೃಜನಾತ್ಮಕ ಚಿತ್ರಗಳನ್ನು ನೀಡುವ ನಿಟ್ಟಿನಲ್ಲಿ ಅವರು ಯಶಸ್ವಿ ಹೆಜ್ಜೆಗಳನ್ನು ಇಡುತ್ತಿದ್ದಾರೆ. ಈಗಾಗಲೇ ಅವರು ಕನ್ನಡ ಚಿತ್ರರಂಗದಲ್ಲಿ ಗಮನಸೆಳೆಯುವ ಚಿತ್ರಗಳನ್ನು ನಿರ್ದೆಶನ ಮಾಡಿದ್ದು, ಇದೀಗ ಅವರ ನೂತನ ಕನಸಿನ ಚಿತ್ರ ಎಕ್ಸ್ ಅಂಡ್ ವೈ ಚಿತ್ರದ ಮೂಲಕ ವಿಶಿಷ್ಟವಾದ ಸಿನಿಮಾವನ್ನು ಪ್ರೇಕ್ಷಕರಿಗೆ ನೀಡುವ ತಯಾರಿಯಲ್ಲಿದ್ದಾರೆ.

ಅವರ ಹೊಸ ಪ್ರಯತ್ನಕ್ಕೆ ಶುಭವಾಗಲಿ. ನಮ್ಮ ಚಿಕ್ಕಮಗಳೂರು ಜಿಲ್ಲೆಯ ಹೆಸರನ್ನು ಚಿತ್ರರಂಗದಲ್ಲಿ ರಾರಾಜಿಸುವಂತೆ ಮಾಡಲಿ ಎಂದು ಹಾರೈಸೋಣ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ