ಅಯೋಧ್ಯೆಯಲ್ಲಿ ನಡೆಯಲಿರುವ ಬಾಲರಾಮನ ಪ್ರಾಣ ಪ್ರತಿಷ್ಠೆ ಸಲುವಾಗಿ ಕೊಟ್ಟಿಗೆಹಾರದಲ್ಲಿ ಭಾನುವಾರದಂದು ಹೊರೆ ಕಾಣಿಕೆ ತರಕಾರಿ, ಅಕ್ಕಿ ಮತ್ತಿತರ ವಸ್ತುಗಳನ್ನು ಗ್ರಾಮದ ಭಕ್ತರು ನೀಡಿದರು.
ಸೋಮವಾರದಂದು ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ಒಂದು ಲಕ್ಷ ರಾಮ ತಾರಕ ಪಠಣ ನಡೆಯಲಿದ್ದು ಸುತ್ತಮುತ್ತಲಿನ ಗ್ರಾಮಸ್ಥರು ಈ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆಯಿಂದಲೇ ಭಜನೆ, ಪೂಜೆ, ಮತ್ತಿತರ ವಿಶೇಷ ಪೂಜಾ ಕಾರ್ಯಕ್ರಮಗಳು ದೇವಸ್ಥಾನದಲ್ಲಿ ನಡೆಯಲಿವೆ. ನಂತರ ಮಧ್ಯಾಹ್ನ ಅನ್ನದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಿಹಿ ವಿತರಣೆ ಕೂಡ ಮಾಡಲಾಗುತ್ತದೆ ಎಂದು ಕೊಟ್ಟಿಗೆಹಾರ ಸೀತಾರಾಮ ದೇವಸ್ಥಾನದ ಪ್ರಕಟಣೆ ತಿಳಿಸಿದೆ.
ಹಾಗೆಯೇ ಇಂದು ವಿವಿಧ ದೇವಾಲಯಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿವೆ.