October 5, 2024

ಚಿಕ್ಕಮಗಳೂರು ನಗರದ ಕೂಗಳತೆ ದೂರದಲ್ಲಿರುವ  ಅಂಬರ್ ವ್ಯಾಲಿ ಖಾಸಗಿ ವಸತಿ ಶಾಲೆ ಆವರಣದಲ್ಲಿ ಸೋಮವಾರ 25 ಕ್ಕೂ ಅಧಿಕ  ಕಾಡಾನೆಗಳಿರುವ ಬೀಟಮ್ಮ ಗ್ಯಾಂಗ್ ಬೀಡು ಬಿಟ್ಟಿದ್ದು, ವಸತಿ ಶಾಲೆಯಲ್ಲಿರುವ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ ಸಿಬ್ಬಂದಿಗಳು ಆತಂಕಗೊಂಡಿದ್ದರು.  ಇದರಿಂದ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಿದ್ದರು.

ಮಂಗಳವಾರದವರೆಗೂ ನಿಷೇಧಾಜ್ಞೆ ಜಾರಿ ಮಾಡಿರುವ ಚಿಕ್ಕಮಗಳೂರು ಜಿಲ್ಲಾಡಳಿತ ಇದೀಗ ಕುಮ್ಕಿ ಆನೆಗಳನ್ನು ಬಳಸಿ ಅರಣ್ಯ ಇಲಾಖೆ ಕಾರ್ಯಚರಣೆ ನಡೆಸಲಿರುವ ಹಿನ್ನಲೆ ನಾಳೆ ವರೆಗೂ ಅಂಬರ್ ವ್ಯಾಲಿ ಶಾಲೆ ಸುತ್ತಮುತ್ತಲಿನ ಮೂಗ್ತಿಹಳ್ಳಿ, ಕದ್ರಿಮಿದ್ರಿ, ರಾಂಪುರ, ನಲ್ಲೂರು ಸೇರಿದಂತೆ 9 ಗ್ರಾಮಗಳಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಬೀಟಮ್ಮ ಗ್ಯಾಂಗ್ ಕಾಡಿಗಟ್ಟುವ ಕಾರ್ಯಾಚರಣೆಯನ್ನು ದುಬಾರೆ, ನಾಗರಹೊಳೆಯಿಂದ ಅರಣ್ಯ ಇಲಾಖೆ ಆರಂಭಿಸಲಿದೆ.

ಆಂಬರ್ ವ್ಯಾಲಿ ವಸತಿ ಶಾಲೆಯ ಸುತ್ತಲೂ ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸರ್ಪಗಾವಲಿದ್ದಾರೆ. 25 ಕಾಡಾನೆಗಳ ತಂಡದಲ್ಲಿ ಐದಾರು ಮರಿಗಳು ಇದ್ದು, ಆನೆ ಓಡಿಸೋದಕ್ಕೆ ಅರಣ್ಯ ಇಲಾಖೆ ಕೂಡ ಹಿಂದೇಟು ಹಾಕುತ್ತಿದೆ. ಮರಿಗಳಿರೋದ್ರಿಂದ ಆನೆಗಳು ಗಾಬರಿಯಾಗಿ ಚಿಕ್ಕಮಗಳೂರು ನಗರಕ್ಕೆ ಎಂಟ್ರಿಯಾದರೆ ದೊಡ್ಡ ಅನಾಹುತವಾಗುತ್ತೆಂದು ಅಧಿಕಾರಿಗಳು  ಮುಂಜಾಗೃತ ಕ್ರಮ ಜರುಗಿಸಿದ್ದರು.

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಬೀಟಮ್ಮ ಗ್ಯಾಂಗ್ ಕಾಡಾನೆಗಳ ದಂಡು ಭಾರಿ ಆತಂಕ ಸೃಷ್ಟಿಸಿದೆ. ಹಾಸನ, ಚಿಕ್ಕಮಗಳೂರು ಜಿಲ್ಲೆಯ ಗಡಿ ಗ್ರಾಮದ ಮೂಲಕ ಚಿಕ್ಕಮಗಳೂರು ತಾಲೂಕಿನ ಕೆ.ಆರ್.ಪೇಟೆ ಗ್ರಾಮಕ್ಕೆ ಬೀಟಮ್ಮ ಗ್ಯಾಂಗ್ ಎಂಟ್ರಿ ಕೊಟ್ಟಿದ್ದು ಜನರಲ್ಲಿ ಭಯ ಹುಟ್ಟಿಸಿದೆ.

ಚಿಕ್ಕಮಗಳೂರು ತಾಲೂಕಿನ ಮುಗ್ತಿಹಳ್ಳಿ ಬಳಿ 25 ಎಕರೆಗೂ ಹೆಚ್ಚು ಪ್ರದೇಶದಲ್ಲಿರುವ ಅಂಬರ್ ವ್ಯಾಲಿ ವಸತಿ ಶಾಲೆ ಆವರಣದಲ್ಲಿ ೨25 ಕಾಡಾನೆಗಳ ತಂಡ ಬೀಡುಬಿಟ್ಟಿವೆ. ಕಾಡಾನೆ ಹಿಂಡು ಕಾಂಪೌಂಡ್ ಮುರಿದು ವಸತಿ ಶಾಲಾ ಆವರಣಕ್ಕೆ ಬಂದಿದ್ದವು. ಹೀಗಾಗಿ ವಸತಿ ಶಾಲೆಯೊಳಗಿರುವ   ವಿದ್ಯಾರ್ಥಿಗಳು, ಸಿಬ್ಬಂದಿಗೆ ವಸತಿ ಶಾಲೆಯಿಂದ ಹೊರ ಬರದಂತೆ ಅರಣ್ಯ ಇಲಾಖೆ ಸೂಚನೆ ನೀಡಿತ್ತು. ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಮುಗ್ತಿಹಳ್ಳಿ ಬಳಿಯ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ವಸತಿ ಶಾಲೆಗೆ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರಿಂದ ಬಿಗಿ ಭದ್ರತೆ ಕೈಗೊಂಡಿದ್ದರು.

ಬೇಲೂರು ಮಾರ್ಗವಾಗಿ ಚಿಕ್ಕಮಗಳೂರಿಗೆ ಬಂದಿರುವ 25ಕ್ಕೂ ಅಧಿಕ ಕಾಡಾನೆಗಳು. 8ಕ್ಕೂ ಅಧಿಕ ಕಾಡಾನೆಗಳು ಬೀಟಮ್ಮ ಗ್ಯಾಂಗ್ ನಿಂದ ಬೇರ್ಪಟ್ಟಿವೆ. ಹಂತಕ ಸಲಗ ಭೀಮ ಕೂಡ ಬೀಟಮ್ಮ ಗ್ಯಾಂಗ್ ನಲ್ಲಿದ್ದಾನೆ. ಎರಡು ದಿನದಿಂದ ಚಿಕ್ಕಮಗಳೂರು ಹೊರ ವಲಯದ ಗ್ರಾಮದಲ್ಲಿ ಕಾಡಾನೆಗಳು ಸಂಚಾರ ಮಾಡುತ್ತಿವೆ.

ಈ ಹಿಂದೆ ಹಲವರ ಸಾವಿಗೆ ಕಾರಣವಾಗಿರುವ ಭೀಮ ಎಂಬ ಪುಂಡನೆ ಕೂಡ ಈ  ಆನೆಗಳ ಗ್ಯಾಂಗ್ ಸೇರಿದ್ದು ಇನ್ನಷ್ಟು ಭೀತಿ ಹೆಚ್ಚಿಸಿದೆ. ಚಿಕ್ಕಮಗಳೂರು ತಾಲೂಕಿನ ಹತ್ತಾರು ಗ್ರಾಮಗಳಲ್ಲಿ ಆತಂಕ ಮನೆ ಮಾಡಿದೆ. ಇಷ್ಟು ದಿನ ಹಾಸನ ಜಿಲ್ಲೆಯ ಬೇಲೂರು-ಸಕಲೇಶಪುರ ಭಾಗದಲ್ಲಿ ಬೀಡುಬಿಟ್ಟಿದ್ದ ಈ ಕಾಡಾನೆಗಳ ಹಿಂಡು ಇದೀಗ ಚಿಕ್ಕಮಗಳೂರು ಜಿಲ್ಲೆಗೆ ಹಿಂಡು-ಹಿಂಡಾಗಿ ಬಂದಿರುವುದು ಕಾಫಿ ಹಾಗೂ ಅಡಿಕೆ ಬೆಳೆಗಾರರಲ್ಲಿ ಇನ್ನಿಲ್ಲದ ಆತಂಕ ತಂದಿದೆ. 25 ಆನೆಗಳ ತಂಡ ಬಂದಿರುವುದರಿಂದ ಅರಣ್ಯ ಇಲಾಖೆ ಕೂಡ ಹೈ ಅಲರ್ಟ್ ಘೋಷಿಸಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ