ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆಯ ಪತ್ರಕರ್ತ ಯೋಗೀಶ್ ಕಾಮೇನಹಳ್ಳಿ ಭಾಜನರಾಗಿದ್ದಾರೆ.
ಫೆಬ್ರವರಿ 3 ಮತ್ತು 4 ದಾವಣಗೆರೆಯಲ್ಲಿ ನಡೆಯಲಿರುವ 38ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ನಡೆಯುತ್ತಿದೆ. ಈ ಸಮ್ಮೇಳನದಲ್ಲಿ ಯೋಗೇಶ್ ಕಾಮೇನಹಳ್ಳಿ ಅವರಿಗೆ ಅತ್ಯುತ್ತಮ ಸುದ್ದಿ ಮತ್ತು ಛಾಯಚಿತ್ರ ವಿಭಾಗದಲ್ಲಿ ಬಂಡಾಪುರ ಮುನಿರಾಜು ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಯೋಗೇಶ್ ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಪತ್ರಿಕಾ ವೃತ್ತಿಯಲ್ಲಿ ನಿರತರಾಗಿದ್ದು, ಪ್ರಸ್ತುತ ಜನಮಿತ್ರ ಪತ್ರಿಕೆಯ ಹಿರಿಯ ವರದಿಗಾರರಾಗಿದ್ದಾರೆ. ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾಗಿರುವ ಯೋಗೇಶ್ ಅವರಿಗೆ ಚಿಕ್ಕಮಗಳೂರು ಜಿಲ್ಲಾ ಪತ್ರಕರ್ತರ ಬಳಗ ಅಭಿನಂದನೆ ಸಲ್ಲಿಸಿದ್ದಾರೆ