October 5, 2024

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ಆಗಿದೆ ಎಂದಾಗಿದ್ದರೆ ಅದು ತಳಮಟ್ಟದಲ್ಲೂ ಆಗಬೇಕು ಎಂಬುದು ಕಾರ್ಯಕರ್ತರ ಅಭಿಪ್ರಾಯವಾಗಿದೆ ಎಂದು ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಸುಧಾಕರ್‌ಶೆಟ್ಟಿ ಹೇಳಿದರು.

ಚಿಕ್ಕಮಗಳೂರು ನಗರದ ಜೆಡಿಎಸ್ ಕಚೇರಿಯಲ್ಲಿ ಭಾನುವಾರ ಏರ್ಪಡಿಸಿದ್ದ ಜಿಲ್ಲೆಯ ಏಳು ತಾಲೂಕುಗಳ ಪದಾಕಾರಿಗಳ ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ಅವರು ಮಾತನಾಡಿದರು. ಲೋಕಾಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ದಳದ ನಡುವೆ ಹೊಂದಾಣಿಕೆಯಾಗಿದೆ. ಈ ಹೊಂದಾಣಿಕೆ ತಳಮಟ್ಟದಲ್ಲೂ ಆಗಬೇಕು ಎಂಬುದು ಕಾರ್ಯಕರ್ತರ ಅಭಿಪ್ರಾಯವಾಗಿದೆ. ಇಂದಿನ ಸಭೆಯಲ್ಲಿ ಕ್ರೂಢಿಕೃತವಾದ ಪದಾಕಾರಿಗಳ ಅಭಿಪ್ರಾಯವನ್ನು ನಾಳೆ ಬೆಂಗಳೂರಲ್ಲಿ ನಡೆಯಲಿರುವ ರಾಜ್ಯ ಕೋರ್ ಕಮಿಟಿ ಸಭೆಗ ಮುಟ್ಟಿಸುತ್ತೇನೆ. ನಂತರ ಜಿಲ್ಲೆಯಲ್ಲಿ ಮುಂದಿನ ಪಕ್ಷ ಸಂಘಟನೆಗೆ ಒತ್ತು ಕೊಡುತ್ತೇವೆ ಎಂದರು.

ಹೊಂದಾಣಿಕೆ ಎಂದ ಮೇಲೆ ನಮ್ಮಿಂದ ಕಾರ್ಯಕರ್ತರು ಬಹಳ ನಿರೀಕ್ಷೆ ಮಾಡುತ್ತಾರೆ. ಹೊಂದಾಣಿಕೆ ಆದ ಕೂಡಲೆ ಇನ್ನೊಂದು ಪಕ್ಷಕ್ಕೆ ಸಂಪೂರ್ಣ ಮಾರ್ಟಿಗೇಜ್ ಮಾಡಿಕೊಂಡಂತೆ ಅಲ್ಲ. ಈಗಿನ ಹೊಂದಾಣಿಕೆ ಲೋಕಸಭಾ ಚುನಾವಣೆಗೆ ಸೀಮಿತವಾಗಿದೆ. ತದನಂತರ ಮುಂದಿನ ಚುನಾವಣೆಗಳಿಗೆ ಯಾವ ರೀತಿ ಹೊಂದಾಣಿಕೆ ಆಗಬೇಕು ಎಂಬುದನ್ನು ಪಕ್ಷನಿರ್ಧರಿಸಲಿದೆ ಎಂದರು.

ಪಕ್ಷದ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್ ಮಾತನಾಡಿ ; ಸದ್ಯಕ್ಕೆ ಪಕ್ಷ ಸಂಘಟನೆಯೆ ನಮ್ಮ ಮುಖ್ಯ ಉದ್ದೇಶ. ಜಿಲ್ಲೆಯ 7 ತಾಲೂಕುಗಳಲ್ಲಿ ಜೆ.ಡಿ.ಎಸ್. ಪ್ರಬಲವಾಗಿದೆ.  ಮೂಡಿಗೆರೆ, ಶೃಂಗೇರಿ, ಕಡೂರು ಸೇರಿ ಎಲ್ಲ ತಾಲೂಕಲ್ಲಿ ಪಕ್ಷದ ಪರವಾಗಿ ಕಳೆದ ಚುನಾವಣೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಲೋಕಸಭಾ ಚುನಾವಣೆ ಈಗಾಗಲೆ ಹತ್ತಿರ ಬರುತ್ತಿದೆ. ಜಿಲ್ಲಾಮಟ್ಟದಿಂದ ಬೂತ್ ಮಟ್ಟದವರೆಗೆ ಪಕ್ಷ ಸಂಘಟನೆ ಮಾಡಲಿದ್ದೇವೆ ಎಂದರು.

ಕಳೆದ 8 ತಿಂಗಳಿಂದ ರಾಜ್ಯ ಸರಕಾರ   ಯಾವುದೇ ಅಭಿವೃದ್ಧಿಗೆ ಒತ್ತು ಕೊಟ್ಟಿಲ್ಲ.   ಎಲ್ಲ ಇಲಾಖೆಗಳಲ್ಲೂ ಭ್ರಷ್ಟಾಚಾರ ಹೆಚ್ಚಾಗಿದೆ. ಬಿಜೆಪಿ ಸರಕಾರವನ್ನು 40 ಪರ್ಸೆಂಟ್ ಸರಕಾರ ಎಂದು ಕಾಂಗ್ರೆಸ್ ಟೀಕಿಸಿತ್ತು. ಆದರೆ, ಇಂದು ಕಾಂಗ್ರೆಸ್ ಸರಕಾರದಲ್ಲಿ ಯಾವುದೇ ಅಭಿವೃದ್ಧಿ ಆಗದೇ ಇರುವದರಿಂದ ಲಂಚಾವತಾರ ಮೇರೆಮೀರಿದೆ ಎಂದು ಆರೋಪಿಸಿದರು.

ಒಂದು ಕಡೆ ಬರಗಾಲ ಇನ್ನೊಂದು ಕಡೆ ಸರಕಾರ ಅಭಿವೃದ್ಧಿಗೆ ಒತ್ತು ಕೊಡುತ್ತಿಲ್ಲ. ಜನರ ಕೈಗೆ ಕೆಲಸವಿಲ್ಲ. ಈ ಸಂದರ್ಭ ಜನರ ವಿರುದ್ಧವಾದ ಯೋಜನೆಗಳು, ದಬ್ಬಾಳಿಕೆ ಹಾಗೂ ಸರಕಾರದ ವೈಫಲ್ಯಗಳ ವಿರುದ್ಧ ಹೋರಾಟ ಮಾಡಲು ಪಕ್ಷ ನಿರ್ಧರಿಸಿದೆ ಎಂದರು.

ಮುಖಂಡರಾದ ಮಂಜಪ್ಪ, ಜಿ.ಎಸ್.ಚಂದ್ರಪ್ಪ, ದೇವಿಪ್ರಸಾದ್, ಶ್ರೀದೇವಿ, ಜಗದೀಶ್, ಸಿ.ಕೆ.ಮೂರ್ತಿ , ಗಂಗಾಧರನಾಯ್ಕ, ಚಂದ್ರು ಮತ್ತಿತರರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ