October 5, 2024

ಹಣದ ವಿಚಾರಕ್ಕೆ ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಐದು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಹಣದ ವಿಚಾರಕ್ಕಾಗಿ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನಲ್ಲಿ ಮರಕ್ಕೆ ಯುವಕನ ಕೈ ಕಾಲು ಕಟ್ಟಿ ಹಾಕಿ ಥಳಿಸಿದ್ದ 5 ಜನರ ಬಂಧನವಾಗಿದೆ.

ಕೊಪ್ಪ ಠಾಣೆಯ ಪೊಲೀಸರು ಹಲ್ಲೆ ನಡೆಸಿ ತಲೆಮರಿಸಿಕೊಂಡಿದ್ದ ಐವರ ಬಂಧಿಸಿದ್ದಾರೆ. ಮಹೇಶ್, ವಿಠಲ್, ಸಿರಿಲ್, ಸುನೀಲ್, ಮಂಜು ಇವರುಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹೋಟೆಲ್ ಕೆಲಸದ ಸಂಬಳ ಕೇಳಿದ್ದಕ್ಕೆ ಯುವಕನ ಮೇಲೆ‌ ಹಲ್ಲೆ ನಡೆಸಲಾಗಿತ್ತು. ಹಗ್ಗದಿಂದ ಕೈ ಕಾಲು ಕಟ್ಟಿ  ಯುವಕನಿಗೆ ಚಿತ್ರಹಿಂಸೆ ನೀಡಲಾಗಿತ್ತು.

ಯುವಕನ ಮೇಲೆ ಹಲ್ಲೆ ನಡೆಸಿ ವಿಡಿಯೋ ರೆಕಾರ್ಡ್ ಮಾಡಿದ್ದರು. ಮದ್ಯಪಾನ ಮಾಡುತ್ತ ಹಲ್ಲೆ ನಡೆಸಿದ್ದ ಪುಂಡರ ಗುಂಪು, ಹಲ್ಲೆ ಮಾಡಿ ಚಿತ್ರ ಹಿಂಸೆ ನೀಡಿರುವ ವಿಡಿಯೋ ವೈರಲ್ ಆಗಿತ್ತು.

ಕೊಪ್ಪ ತಾಲೂಕಿನ ಸೋಮ್ಲಾಪುರ ರಸ್ತೆಯ ಪ್ಲಾಂಟೇಶನ್ ನಲ್ಲಿ ನಡೆದಿದ್ದ ಘಟನೆ. ಕೊಪ್ಪ ಸಮೀಪದ ಕರ್ಕೇಶ್ವರ  ಗ್ರಾಮದ ಸತೀಶ್ ಮೇಲೆ ಹಲ್ಲೆ ನಡೆಸಲಾಗಿತ್ತು. ಗಂಭೀರ ಗಾಯಗೊಂಡ ಸತೀಶ್  ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹಲ್ಲೆ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಈ ವಿಷಯ ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಐದು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಐವರ ಬಂಧನಕ್ಕೆ ಚಿಕ್ಕಮಗಳೂರು ಎಸ್ಪಿ ಪೊಲೀಸ್ ತಂಡ ರಚನೆ ಮಾಡಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ