October 5, 2024

ಕೊಡಗಿನಲ್ಲಿ ಭೀಕರ ಜಲ ದುರಂತದ ಸರಣಿ ಮುಂದುವರಿದಿದೆ. ಕಾವೇರಿ ನದಿಯಲ್ಲಿ ಮುಳುಗಿ ನಾಲ್ಕು ದಿನಗಳ ಅಂತರದಲ್ಲಿ ನಾಲ್ಕು ಮಂದಿ ಯುವಕರು ಮೃತಪಟ್ಟಿದ್ದಾರೆ.   ಕೊಡಗು ಜಿಲ್ಲೆ   ಕುಶಾಲ ನಗರದಲ್ಲಿ ಈ ದುರಂತ ಸಂಭವಿಸಿದೆ.

ಕುಶಾಲ ನಗರದ ಕೂಡಿಗೆಯಲ್ಲಿ ಕಾವೇರಿ ನದಿಗೆ ಈಜಲು ತೆರಳಿದ್ದ ಮೂವರು ಯುವಕರಾದ ವಿನೋದ್, ಸಚಿನ್, ಶ್ರೀನಿವಾಸ್ ಎಂಬ ಯುವಕರು ಮೃತಪಟ್ಟಿದ್ದಾರೆ.

ಈ ಮೂವರು ಯುವಕರು ಮುಳ್ಳುಸೋಗೆ, ಚಿಕ್ಕತ್ತೂರು, ಹೆಬ್ಬಾಲೆ ಮೂಲದದವರು ಎಂದು ತಿಳಿದುಬಂದಿದೆ. ಮಾರ್ಚ್ 6ರಂದು ಸಂಜೆ ಜತೆಯಾಗಿ ಈಜಲು ತೆರಳಿದ್ದ ಮೂವರು ನೀರಿನಲ್ಲಿ ಮುಳುಗಿ‌ ಸಾವನ್ನಪ್ಪಿದ್ದಾರೆ.

ಯುವಕರು ಒಂದೇ ಕಾರಿನಲ್ಲಿ ಬಂದಿದ್ದರು ಎನ್ನಲಾಗಿದೆ. ಕಾರು ನದಿಯ ಬದಿಯಲ್ಲಿ ನಿಂತಿದ್ದನ್ನು ಗಮನಿಸಿ ಯುವಕರು ನದಿಯಲ್ಲಿ ಮುಳುಗಿರುವ ವಿಷಯ ಪತ್ತೆಯಾಗಿದೆ.

ಅದಾಗಿ ಮೂರೇ ದಿನದಲ್ಲಿ ಮತ್ತೋರ್ವ ಯುವಕ ಇದೇ ಕುಶಾಲನಗರ ಸಮೀಪ ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.  ಕುಶಾಲನಗರ ಸಮೀಪದ ನಂಜರಾಯಪಟ್ಟಣದಲ್ಲಿ ಶುಕ್ರವಾರ ಈ ದುರ್ಘಟನೆ ನಡೆದಿದ್ದು, ಸ್ನೇಹಿತರೊಂದಿಗೆ ಸ್ನಾನಕ್ಕೆ ತೆರಳಿದ್ದ ಸಂದರ್ಭ ದುರ್ಘಟನೆ ನಡೆದಿದೆ. ಚೆಟ್ಟಳ್ಳಿ ಸಮೀಪದ ಕಂಡಕೆರೆ ನಿವಾಸಿ ಶಂಭು ಎಂಬುವರ ಪುತ್ರ ಶರತ್ (24) ಮೃತ ದುರ್ದೈವಿ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ