ಹೆಜ್ಜೇನು ಕಡಿದು ರೈತರೊಬ್ಬರು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಧರಸಿಹಳ್ಳಿ ಗ್ರಾಮದಲ್ಲಿ ನಡೆದಿದೆ ಈ ದರ್ಘಟನೆ ನಡೆದಿದೆ. ಆನಂದ್ (45) ಮೃತ ದುರ್ದೈವಿ.
ಆನಂದ್ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಹೆಜ್ಜೇನು ದಾಳಿ ಮಾಡಿದೆ. ಹೆಜ್ಜೇನಿನಿಂದ ತಪ್ಪಿಸಿಕೊಳ್ಳಲು ಆನಂದ್ ಹರಸಾಹಸ ಪಟ್ಟಿದ್ದಾರೆ. ತುಂಬಾ ದೂರ ಓಡಿ ಹೋದರೂ ಬಿಡದ ನೂರಾರು ಜೇನು ಹುಳುಗಳ ಕಡಿತದಿಂದ ತೀವ್ರವಾಗಿ ಅಸ್ವಸ್ಥಗೊಂಡಿದ್ದರು.
ಕೂಡಲೇ ಅಲ್ಲಿದ್ದವರು ಆನಂದ್ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆನಂದ್ ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.