ರಾಜ್ಯದಲ್ಲಿ ಕಾಫಿ, ಏಲಕ್ಕಿ, ಕಾಳುಮೆಣಸು, ರಬ್ಬರ್ ಅಥವಾ ಟೀ ಬೆಳೆಗಳನ್ನು ಬೆಳೆದಿರುವ ಸರ್ಕಾರಿ ಸಾಗುವಳಿ ಜಮೀನನ್ನು ಗುತ್ತಿಗೆ ಆಧಾರದಲ್ಲಿ ನೀಡಲು ಸರ್ಕಾರ ಆದೇಶ ಹೊರಡಿಸಿದೆ
ಈ ಹಿಂದಿನ ಬಿ.ಜೆ.ಪಿ. ಸರ್ಕಾರದ ಅವಧಿಯಲ್ಲಿ ಸದನದಲ್ಲಿ ಅನುಮೋದನೆ ಪಡೆದಿದ್ದ ಆದೇಶಕ್ಕೆ ಈಗಿನ ಸರ್ಕಾರ ಕೆಲವು ಮಾರ್ಪಾಡುಗಳನ್ನು ಮಾಡಿ ಜಾರಿಗೆ ತರಲು ಅಧಿಕೃತವಾಗಿ ಆದೇಶ ಹೊರಡಿಸಿದೆ.
25 ಎಕರೆವರೆಗಿನ ಅಕ್ರಮ ಒತ್ತುವರಿ ಜಮೀನಿನನ್ನು 30 ವರ್ಷಗಳ ವರೆಗೆ ಗುತ್ತಿಗೆ ಆಧಾರದಲ್ಲಿ ನೀಡಲು ಸರ್ಕಾರ ನಿಯಮಾವಳಿಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲು ಮುಂದಾಗಿದೆ.
ಈ ನಿಟ್ಟಿನಲ್ಲಿ ಸರ್ಕಾರಿ ಜಾಗ ಒತ್ತುವರಿ ಮಾಡಿರುವ ರೈತರಿಂದ ಅರ್ಜಿಗಳನ್ನು ಪಡೆಯಲು ನಿರ್ಧರಿಸಿದೆ.
ಸರ್ಕಾರದ ನಿರ್ಧಾರವನ್ನು ಕರ್ನಾಟಕ ಬೆಳೆಗಾರರ ಒಕ್ಕೂಟ ಸೇರಿದಂತೆ ವಿವಿಧ ಬೆಳೆಗಾರರ ಸಂಘಟನೆಗಳು ಸ್ವಾಗತಿಸಿವೆ.
ಗುತ್ತಿಗೆ ಆಧಾರದಲ್ಲಿ ನೀಡಲು ಸರ್ಕಾರ ರೂಪಿಸಿರುವ ನಿಯಮಾವಳಿಗಳು ಮತ್ತು ಅರ್ಜಿ ನಮೂನೆ ಈ ಕೆಳಗಿನಂತಿವೆ.