ಮೂಡಿಗೆರೆ ಪಟ್ಟಣದ ಛತ್ರಮೈದಾನ ನಿವಾಸಿ, ಪಟ್ಟಣದ ಹಿರಿಯ ಉದ್ಯಮಿಗಳಲ್ಲಿ ಒಬ್ಬರಾಗಿದ್ದ ಕೇಶವಮೂರ್ತಿ (83) ನಿಧನರಾಗಿದ್ದಾರೆ.
ಮೂಡಿಗೆರೆ ಪಟ್ಟಣ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯ ಸುದೀರ್ ಅವರ ತಂದೆ ಕೇಶವಮೂರ್ತಿ ಪಟ್ಟಣದಲ್ಲಿ ವ್ಯಾಪಾರಿಯಾಗಿ ಮತ್ತು ಕಾಫಿ ಬೆಳೆಗಾರರಾಗಿ ಪರಿಚಿತರಾಗಿದ್ದರು. ವಯೋಸಹಜ ಅನಾರೋಗ್ಯದಿಂದ ಅವರು ಗುರುವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ, ಒಬ್ಬ ಮಗ, ಐವರು ಪುತ್ರಿಯರು, ಮೊಮ್ಮಕ್ಕಳು. ಆಪಾರ ಬಂದು ಬಳಗವನ್ನು ಅಗಲಿದ್ದಾರೆ.
ಛತ್ರಮೈದಾನದ ಅವರ ಮನೆಯಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಇರಿಸಿದ್ದು, ಅಂತ್ಯ ಸಂಸ್ಕಾರ ಇಂದು ಸಂಜೆ 3.ಗಂಟೆಗೆ ಮೂಡಿಗೆರೆ ಎಂಜಿಎಂ ಆಸ್ಪತ್ರೆಯ ಹಿಂಬಾಗ ಇರುವ ಅವರ ತೋಟದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.