October 5, 2024

ಮಡಿಕೇರಿಯಲ್ಲಿ ನಡೆದ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  ಭಾಗವಹಿಸಿದ ಬಿ.ಜೆ.ಪಿ. ಕಾರ್ಯಕರ್ತರ ಸಮಾವೇಶದಲ್ಲಿ ಮಾಜಿ ಶಾಸಕರು ಸೇರಿ ಹಲವು ನಾಯಕರ ಜೇಬುಗಳಿಗೆ ಖದೀಮರು ಕನ್ನ ಹಾಕಿದ ಘಟನೆ ನಡೆದಿದೆ.

ಮಡಿಕೇರಿಯ ಕ್ರಿಸ್ಟಲ್‌ ಕೋರ್ಟ್‌ನಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶ ನಡೆದಿದೆ. ನೂರಾರು ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೂ ಪಾಲ್ಗೊಂಡು, ಲೋಕಸಭೆ ಚುನಾವಣೆ ಸಿದ್ಧತೆ ಸೇರಿ ಹಲವು ವಿಷಯಗಳ ಕುರಿತು ಮಾತನಾಡಿದರು. ಇದೇ ವೇಳೆ ಕಾರ್ಯಕ್ರಮದ ನಡುವೆ ನುಸುಳಿದ್ದ ಜೇಜುಗಳ್ಳರು ಮಾಜಿ ಶಾಸಕ ಅಪ್ಪಚ್ಚು ರಂಜನ್‌ ಸೇರಿ ಹಲವು ನಾಯಕರ ಜೇಬಿನಿಂದ ಲಕ್ಷಾಂತರ ರೂಪಾಯಿ ಕಳ್ಳತನ ಮಾಡಿದ್ದಾರೆ.

ಮಾಜಿ ಶಾಸಕ ಅಪ್ಪಚ್ಚು ರಂಜನ್‌ ಅವರ ಜೇಬಿನಲ್ಲಿದ್ದ ಪರ್ಸ್‌ ಎಗರಿಸಿದ್ದು, ಅದರಲ್ಲಿ 20 ಸಾವಿರ ರೂ. ಇತ್ತು ಎಂಬುದಾಗಿ ಅವರೇ ಹೇಳಿದ್ದಾರೆ. ಇನ್ನು ಮಾಜಿ ಸ್ಪೀಕರ್‌ ಕೆ.ಜಿ. ಬೋಪಯ್ಯ ಅವರ ಜೇಬಿನಿಂದ 13 ಸಾವಿರ ರೂ., ಗುತ್ತಿಗೆದಾರರೊಬ್ಬರ ಜೇಬಿಗೂ ಕನ್ನ ಹಾಕಿದ್ದಾರೆ ಹಾಗೂ ಬಿಜೆಪಿ ಮುಖಂಡರೊಬ್ಬರ ಜೇಬಿನಿಂದ 25 ಸಾವಿರ ರೂ. ಎಗರಿಸಲಾಗಿದೆ.

ಕಾರ್ಯಕ್ರಮದಲ್ಲಿ ನೂರಾರು ಜನ ಪಾಲ್ಗೊಂಡ ಕಾರಣ ನಾಯಕರು ಗಡಿಬಿಡಿಯಲ್ಲಿದ್ದರು.  ಇದೇ ಸಂದರ್ಭವನ್ನು ನೋಡಿಕೊಂಡ ಕಳ್ಳರು ಕೈಚಳಕ ತೋರಿಸಿದ್ದಾರೆ. ಈ ಬಗ್ಗೆ ಸಿಸಿಟಿವಿ ದೃಶ್ಯ ಪರಿಶೀಲಿಸಲಾಗುತ್ತಿದ್ದು, ಕಳ್ಳರ ಪತ್ತೆಗೆ ಪ್ರಯತ್ನಿಸಲಾಗುತ್ತಿದೆ.

ಇತ್ತೀಚೆಗೆ ಈ ರೀತಿಯ ಕೃತ್ಯಗಳು ಹೆಚ್ಚಾಗುತ್ತಿದ್ದು, ದೊಡ್ಡ ದೊಡ್ಡ ಕಾರ್ಯಕ್ರಮಗಳ ನಡುವೆ ನುಸುಳಿ ಗಣ್ಯರ ಪರ್ಸ್ ಗಳಿಗೆ ಖನ್ನಾ ಹಾಕುವ ವ್ಯವಸ್ಥಿತ ಗ್ಯಾಂಗ್ ಕಾರ್ಯನಿರ್ವಹಿಸುತ್ತಿವೆ. ಇದರಲ್ಲಿ ಒಂದಕ್ಕಿಂತ ಹೆಚ್ಚು ಮಂದಿ ಭಾಗವಹಿಸಿ ಕಳ್ಳತನ ಮಾಡುತ್ತಿರುವುದು ಕಂಡುಬಂದಿದ್ದು, ಸಭೆ ಸಮಾವೇಶದಲ್ಲಿ ಭಾಗವಹಿಸುವವರು ತಮ್ಮ ಪರ್ಸ್ ಮೊಬೈಲ್ ಹಾಗೂ ಬೆಲೆಬಾಳುವ ವಸ್ತುಗಳ ಬಗ್ಗೆ ಎಚ್ಚರಿಕೆ ವಹಿಸಬೇಕಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ