October 5, 2024

ಚಿಕ್ಕಮಗಳೂರು ತಾಲ್ಲೂಕಿನ ಆಲ್ದೂರು ಪಟ್ಟಣದಲ್ಲಿ ಸ್ಟೆಷನರಿ ಅಂಗಡಿ ಮಾಲೀಕನೋರ್ವ ತನ್ನ ಅಂಗಡಿಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ.

ಆಲ್ದೂರು ಪಟ್ಟಣದಲ್ಲಿ ಹಲವು ವರ್ಷಗಳಿಂದ ರತ್ನ ಬುಕ್ ಸ್ಟೋರ್ ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದ ಲೋಕನಾಥ್ ಅವರ ಪುತ್ರ ಶಮಂತ್ (34 ವರ್ಷ) ಶುಕ್ರವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಅವರ ಕುಟುಂಬದವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಬಗ್ಗೆ ಶಮಂತ್ ಅವರ ತಂದೆ ಬಿ.ಪಿ. ಲೋಕನಾಥ್ ಅವರು ಶುಕ್ರವಾರ ಆಲ್ದೂರು ಠಾಣೆಗೆ ದೂರು ನೀಡಿದ್ದು, ದೂರಿನ ಸಾರಾಂಶವೆಂದರೆ : ನನ್ನ ಮಗ ಶಮಂತ್, 34 ವರ್ಷ ಬುಕ್ ಸ್ಟೋರ್ ಅಂಗಡಿ ವ್ಯಾಪಾರ ವ್ಯವಹಾರ ಮಾಡಿಕೊಂಡಿದ್ದನು. ಇವನು ಅಂಗಡಿ ಮೇಲೆ ಹಲವಾರು ಜನಗಳಲ್ಲಿ ಕೈಸಾಲ ಮಾಡಿಕೊಂಡಿದ್ದನು. ದಿನಾಂಕ;-11-04-2024 ರಂದು ರಾತ್ರಿ ಅಂಗಡಿಯಲ್ಲಿ ಮಲಗಿದ್ದು, ಈ ದಿನ ಬೆಳಗ್ಗೆ ಎಷ್ಟು ಹೊತ್ತಾದರೂ ಅಂಗಡಿ ಬಾಗಿಲು ತೆಗೆದಿರುವುದಿಲ್ಲ. ಅನುಮಾನ ಬಂದು ಈ ದಿನ ದಿನಾಂಕ;-12-04-2024 ರಂದು ಬೆಳಗ್ಗೆ 08-00 ಗಂಟೆಗೆ  ಹೋಗಿ ಕರೆದರೂ ಬಾಗಿಲು ತೆಗೆದಿರುವುದಿಲ್ಲ. ಹಿಂಬಾಗಿಲು ತೆಗೆದು ಒಳಗೆ ಹೋಗಿ ನೋಡುವಾಗ ಶಮಂತ್ ಅಂಗಡಿಯಲ್ಲಿಯೇ ಕುತ್ತಿಗೆಗೆ ನೇಣು ಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುತ್ತಾನೆ ಎಂದು ತನ್ನ ದೂರಿನಲ್ಲಿ ತಿಳಿಸಿದ್ದಾರೆ.

ಶಮಂತ್ ಆಲ್ದೂರು ಪಟ್ಟಣದಲ್ಲಿ ಚಿರಪರಿಚಿತ ವ್ಯಕ್ತಿಯಾಗಿದ್ದರು. ಅವರ ಆತ್ಮಹತ್ಯೆಯ ಸುದ್ದಿ ತಿಳಿದು ಆಲ್ದೂರು ಜನರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವಿವಾಹಿತರಾಗಿದ್ದ ಶಮಂತ್ ತಂದೆ ತಾಯಿ, ಇಬ್ಬರು ಸಹೋದರಿಯರು ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ