ಆಕಸ್ಮಿಕವಾಗಿ ಬೆಂಕಿ ತಗುಲಿ ಕಾಫಿ, ಏಲಕ್ಕಿ, ಮೆಣಸು, ಅಡಕೆ ಗಿಡಗಳು ಬೆಂಕಿಗೆ ಸುಟ್ಟು ಕರಕಲು ಆಗಿರುವ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಹೊರಟ್ಟಿಯಲ್ಲಿ ನಡೆದಿದೆ
ಬಾಳೂರು ಹೊರಟ್ಟಿಯ ವಿಜೇಂದ್ರ ಎಂಬವರಿಗೆ ಸೇರಿದ್ದ ತೋಟ ಬೆಂಕಿಗೆ ಸಂಪೂರ್ಣ ಹಾನಿಯಾಗಿದೆ. ಕೂಡಲೇ ಸ್ಥಳೀಯ ಗ್ರಾಮಸ್ಥರು ಸೇರಿ ಬೆಂಕಿ ನಂದಿಸಲು ಹರಸಹಾಸ ಪಟ್ಟಿದ್ದಾರೆ.
ಬೆಂಕಿಯ ಕೆನ್ನಾಲಿಗೆಗೆ ತೋಟ ಬಹುತೇಕ ಸುಟ್ಟು ಕರಕಲಾಗಿದೆ. ಇದರಿಂದ ವರ್ಷಗಳ ಕಾಲ ಕಷ್ಟಪಟ್ಟು ಬೆಳೆದಿದ್ದ ಗಿಡಗಳು ಬೆಂಕಿಗೆ ಆಹುತಿಯಾಗಿವೆ. ತೋಟದ ಸ್ಥಿತಿಯನ್ನು ಕಂಡು ರೈತ ಕಂಗಾಲಾಗಿದ್ದಾರೆ.