October 5, 2024

ಗುರುವಾರ ಸಂಜೆ ಸಿಡಿಲು ಬಡಿದು ವ್ಯಕ್ತಿಯೋರ್ವರು ಗಂಭೀರ ಗಾಯವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೂಡಿಗೆರೆ ತಾಲ್ಲೂಕಿನ ಬೆಟ್ಟಗೆರೆ ಗ್ರಾಮದಲ್ಲಿ ಸಿಡಿದು ಬಡಿದು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಟ್ಟಗೆರೆ ಗ್ರಾಮದ ಸಮೀಪದ ಕಡಗೋಡು ನಿವಾಸಿ ಲಕ್ಷ್ಮಣ ಶೆಟ್ಟಿ  ಗಂಭೀರ ಗಾಯಗೊಂಡಿರುವ ವ್ಯಕ್ತಿ. ಗುರುವಾರ ರಾತ್ರಿ 8.30 ಸಮಯದಲ್ಲಿ ಮನೆಗೆ ಸಿಡಿಲು ಬಡಿದು ಮನೆಯಲ್ಲಿ ಕುಳಿತಿದ್ದ  ಲಕ್ಷ್ಮಣ ಅವರ ಕಾಲು ಹಾಗೂ ಕಿಡ್ನಿ ಹಾಗೂ ಲಿವರ್ ಗೆ ಪೆಟ್ಟಾಗಿದ್ದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸೇರಿಸಲಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರ ಪುತ್ರ  ದರ್ಶನ್ ತಿಳಿಸಿದ್ದಾರೆ.

ಇವರು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಸಿಡಿಲು ಬಡಿಯುವಾಗ ಲಕ್ಷ್ಮಣ್ ಪತ್ನಿ ಕೂಡ ಮನೆಯಲಿದ್ದರು.

ಲಕ್ಷ್ಮಣ್ ಅವರ ಚಿಕಿತ್ಸೆಗೆ ಲಕ್ಷಾಂತರ ರುಪಾಯಿ ವೆಚ್ಚವಾಗಲಿದ್ದು, ಬಡ ಕುಟುಂಬದ ಹಿನ್ನಲೆ ಹೊಂದಿರುವ ಇವರು ಚಿಕಿತ್ಸೆ ವೆಚ್ಚ ಭರಿಸಲಾಗದೆ ಕಂಗಾಲಾಗಿದ್ದಾರೆ. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ತಕ್ಷಣ ಇವರ ನೆರವಿಗೆ ಬರಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಅಧಿಕಾರಿಗಳ ಭೇಟಿ : ಸಿಡಿಲು ಬಡಿದಿರುವ  ಲಕ್ಷ್ಮಣ ಅವರ ಮನೆಗೆ ಗ್ರಾಮದ ಲೆಕ್ಕಾಧಿಕಾರಿ ಉಮೇಶ್, ಪಿಡಿಓ ದರ್ಶನ್ ಮತ್ತಿತರ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ಗಾಯಾಳುಗೆ ಸೂಕ್ತ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದು ಅಧಿಕಾರಿಗಳು  ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ