ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಒಬ್ಬರು ಸಾವನ್ನಪ್ಪಿದ ಘಟನೆ ಬಾಳೆಹೊನ್ನೂರು ಸಮೀಪ ಸಂಭವಿಸಿದೆ.
ಮಹದೇವ್ (30) ವಿದ್ಯುತ್ ಶಾಕ್ ನಿಂದ ಮೃತಪಟ್ಟ ಲೈನ್ ಮ್ಯಾನ್, ಬಾಳೆಹೊನ್ನೂರು ಸಮೀಪದ ಸಿಗೋಡು ಗ್ರಾಮದಲ್ಲಿ ಬುಧವಾರ ದುರ್ಘಟನೆ ನಡೆದಿದೆ.
ಟಾನ್ಸ್ ಫಾರ್ಮರ್ ರಿಪೇರಿ ಮಾಡುವಾಗ ಏಕಾಏಕಿ ಕರೆಂಟ್ ಬಂದಿದ್ದು ಲೈನ್ ಮ್ಯಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ನಾಲ್ವರು ಲೈನ್ ಮ್ಯಾನ್ ಹಾಗೂ ಅಧಿಕಾರಿಗಳು ಟಾನ್ಸ್ ಫಾರ್ಮರ್ ರಿಪೇರಿಗೆ ತೆರಳಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.
ಮೃತ ಮಹದೇವ್ ಹಾಸನ ಜಿಲ್ಲೆಯ ಹೊಳೆನರಸೀಪುರ ಮೂಲದವರೆಂದು ತಿಳಿದುಬಂದಿದೆ.