October 5, 2024

ಕೊಡಗು ಜಿಲ್ಲೆಯ ಸೋಮವಾರಪೇಟೆ ಬಳಿ ಬಾಲಕಿಯ ರುಂಡ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿದ್ದ ಆರೋಪಿ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಹತ್ಯೆ ಮಾಡಿದ್ದ ಆರೋಪಿ ಪ್ರಕಾಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ರುಂಡ ಹಾಗೂ ಕೋವಿಯೊಂದಿಗೆ ಆರೋಪಿ ಪರಾರಿಯಾಗಿದ್ದ. ಕಾಡಿನಲ್ಲಿದ್ದ ಆತನನ್ನು ಸೋಮವಾರಪೇಟೆ ಪೊಲೀಸ್‌ ಠಾಣೆಗೆ ಪೊಲೀಸರು ಕರೆತಂದಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿಲ್ಲ : ಶುಕ್ರವಾರ ದಿನ ಕೊಲೆ ಆರೋಪಿ ಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸುದ್ದಿ ಹರಿದಾಡಿತ್ತು. ಪ್ರಕಾಶ್ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಸುದ್ದಿ ಹಬ್ಬಿತ್ತು. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೊಡಗು ಎಸ್ಪಿ ಆರೋಪಿಯನ್ನು ಅರಣ್ಯ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಅರೋಪಿ ಸೆರೆಯಾದರೂ ಬಾಲಕಿಯ ರುಂಡ ಮಾತ್ರ ಪತ್ತೆಯಾಗಿಲ್ಲ. ಹೆಚ್ಚಿನ ವಿಚಾರಣೆ ನಡೆಸಿ ನಂತರ ಮಾಹಿತಿ ನೀಡುವುದಾಗಿ ಎಸ್‌ಪಿ ರಾಮರಾಜನ್ ತಿಳಿಸಿದ್ದಾರೆ.

ಘಟನೆ ಹಿನ್ನೆಲೆ

ಸೋಮವಾರಪೇಟೆ ಸಮೀಪದ ಸೂರ್ಲಬ್ಬಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ಮೀನಾ, ಈ ಕುಗ್ರಾಮದಲ್ಲಿ ಈ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಏಕೈಕ ವಿದ್ಯಾರ್ಥಿನಿ.  ಮೀನಾ ಮೇ.09 ರಂದು ಎಸ್​ಎಸ್​ಎಲ್​ಸಿ ಪಾಸ್​ ಆದ ಖುಷಿಯಲ್ಲಿದ್ದಳು. ಮತ್ತೊಂದು ಕಡೆ ಅವತ್ತೇ ಆಕೆಯ ಪ್ರಿಯಕರನ ಜೊತೆ ಎಂಗೇಜ್ಮೆಂಟ್ ಕೂಡ ಆಗಿತ್ತು. ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮನೆಗೆ ಭೇಟಿ ನೀಡಿ 18 ವರ್ಷ ತುಂಬುವ ವರೆಗೆ ಮೀನಾಳಿಗೆ ಮದುವೆ ಮಾಡದಂತೆ ಪೋಷಕರ ಬಳಿ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ. ಈ ವಿಚಾರ ಜಗಳ ಶುರು ಮಾಡಿದ್ದ ಮೀನಾಳ ಪ್ರಿಯಕರ ಮಚ್ಚು ತಂದು ಮೀನಾಳ ಕತ್ತು ಕತ್ತರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ