October 5, 2024

ಕಾಫಿತೋಟದಲ್ಲಿ ಮರಗಸಿ ಮಾಡುವಾಗ ಮತ್ತೊಂದು ಅವಘಡ ಸಂಭವಿಸಿದೆ. ಮೂಡಿಗೆರೆ ತಾಲ್ಲೂಕಿನಲ್ಲಿ ಈಗ್ಗೆ ನಾಲ್ಕು ದಿನಗಳ ಹಿಂದೆ ಮರದಿಂದ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ.

ಕಾಫಿ ತೋಟವೊಂದರಲ್ಲಿ ಮರಗಸಿ ಮಾಡುವಾಗ ಮರದ ಕೊಂಬೆ ವಿದ್ಯುತ್ ಲೈನಿಗೆ ತಾಗಿದ ಪರಿಣಾಮ ಕಾರ್ಮಿಕರೋರ್ವರು ಮರದಲ್ಲೇ ಪ್ರಾಣ ಬಿಟ್ಟಿದ್ದಾರೆ. ಕುನ್ನಳ್ಳಿ ಅಂಬೇಡ್ಕರ್ ನಗರದ ಚಂದ್ರಪ್ಪ(48 ವರ್ಷ) ಮೃತ ದುರ್ದೈವಿ.

ಮೂಡಿಗೆರೆ ಸಮೀಪದ ಕುನ್ನಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಕುನ್ನಹಳ್ಳಿ ಸುಂಕಸಾಲೆ ಗ್ರಾಮದ ಚಂದ್ರೇಗೌಡ ಎಂಬುವವರ ತೋಟದಲ್ಲಿ ಈ ದುರ್ಘಟನೆ ನಡೆದಿದೆ.

ಶನಿವಾರ ತೋಟದಲ್ಲಿ ಮರಗಸಿ ಮಾಡುತ್ತಿದ್ದಾಗ ಸಿಲ್ವರ್ ಓಕ್ ಮರವೊಂದರ ಕೊನೆ ಕಡಿಯುತ್ತಿದ್ದಾಗ ಪಕ್ಕದಲ್ಲೇ ಹಾದು ಹೋಗಿದ್ದ ವಿದ್ಯುತ್ ಪವರ್ ಲೈನಿಗೆ ಮರದ ಕೊಂಬೆ ತಾಗಿದ್ದು, ಪರಿಣಾಮ ಮರಕ್ಕೆ ವಿದ್ಯುತ್ ಪ್ರವಹಿಸಿದ್ದು, ಮರದಲ್ಲಿದ್ದ ಚಂದ್ರಪ್ಪಅವರು ವಿದ್ಯುತ್ ಶಾಕ್ ನಿಂದ ಸ್ಥಳದಲ್ಲೇ ಮೃತಪಟ್ಟಿರುತ್ತಾರೆ. ಮರದ ಕೊಂಬೆಯನ್ನು ಹಿಡಿದುಕೊಂಡ ಸ್ಥಿತಿಯಲ್ಲೇ ಅವರು ಮರದಲ್ಲಿ ಉಸಿರು ಚೆಲ್ಲಿದ್ದಾರೆ.

ಈ ಘಟನೆಯ ಬಗ್ಗೆ ತೋಟದ ಮಾಲೀಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವ ಭರವಸೆ ವ್ಯಕ್ತಪಡಿಸಿದ್ದಾರೆ.

ಮೃತ ಚಂದ್ರಪ್ಪ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ