ನೂತನವಾಗಿ ವಿಧಾನ ಪರಿಷತ್ತಿನ ಸದಸ್ಯರಾಗಿ ಆಯ್ಕೆಯಾಗಿರುವ ಐವನ್ ಡಿಸೋಜ ಇವರನ್ನು ಬಣಕಲ್ ಧರ್ಮಕೇಂದ್ರದ ಕ್ರೈಸ್ತ ಮುಖಂಡರು ಅವರನ್ನು ಭೇಟಿ ಮಾಡಿ ಅಭಿನಂದಿಸಿ ಗೌರವಿಸಿದ್ದಾರೆ.
ಅಭಿನಂದನೆ ಸ್ವೀಕರಿಸಿ ಮಾತನಾಡಿರುವ ಐವನ್ ಡಿಸೋಜ ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರವು ಎಲ್ಲಾ ಜನಾಂಗದ ಹಿತದೃಷ್ಟಿಯಿಂದ ಕೆಲಸ ಮಾಡುತ್ತಿದೆ. ಬಡವರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದು ಬಡತನ ನಿರ್ಮೂಲನೆಗೆ ಪ್ರಯತ್ನ ನಡೆಸುತ್ತಿದೆ. ಎಲ್ಲಾ ಸಮುದಾಯದವರು ಸೌಹಾರ್ದತೆಯಿಂದ ಜೀವನ ನಡೆಸಬೇಕು ಎಂಬುದು ಸರ್ಕಾರದ ದ್ಯೇಯವಾಗಿದೆ. ಈ ನಿಟ್ಟಿನಲ್ಲಿ ನನಗೆ ದೊರಕಿರುವ ಅವಕಾಶದಲ್ಲಿ ರಾಜ್ಯದ ಜನರ ಸೇವೆ ಮಾಡಲು ಸದಾ ಉತ್ಸುಕನಾಗಿದ್ದೇನೆ ಎಂದಿದ್ದಾರೆ.
ಸಂದರ್ಭದಲ್ಲಿ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಹರ್ಷ ಮೆಲ್ವಿನ್ ಲಸ್ರಾದೊ,ವಿಕ್ಟರ್ ಮಾರ್ಟಿಸ್,ಇಂತ್ರು ಕರ್ನೆಲಿಯೋ,ಜೋಕಿಂ ಲೋಬೊ ಮತ್ತಿತರರು ಇದ್ದರು.